ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್‌ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್‌ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್‌ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. “ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು” ಎಂದು ಡೆತ್‌ನೋಟ್‌ನಲ್ಲಿ ಯುವಕ ಬರೆದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

11 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago