ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ

ಪ್ರೇಮಿಗಳ ದಿನವೇ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಿಂದ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡಿರೋ ಪ್ರಕರಣ ಬೆಳಕಿಗೆ ಬಂದಿದೆ.

ಮೂರು ದಿನಗಳಿಂದ ಅನಾಥವಾಗಿದ್ದ ಬೈಕ್ ಹಿಂದೆ ಬಿದ್ದಿದ್ದ ಪೊಲೀಸರಿಗೆ ಯುವಕನ ಆತ್ಮಹತ್ಯೆ ಪ್ರಕರಣ ತಿಳಿದಿದೆ. ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬಂದು ಅರುಣ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನ ಮೃತದೇಹ ಸಹ ಪತ್ತೆಯಾಗಿದೆ.

ಕಳೆದ ಶನಿವಾರ ತನ್ನ ಸ್ನೇಹಿತನ ಬೈಕ್‌ನಲ್ಲಿ ನಂದಿಬೆಟ್ಟಕ್ಕೆ ಬಂದ ಅರುಣ್, ಪಾರ್ಕಿಂಗ್ ಪ್ಲಾಟ್‌ನಲ್ಲಿ ಬೈಕ್ ನಿಲ್ಲಿಸಿ ನಂದಿಬೆಟ್ಟದ ಮೇಲ್ಭಾಗಕ್ಕೆ ಹೋಗಿದ್ದಾನೆ. ಆದರೆ ಶನಿವಾರ ಬೆಟ್ಟದ ಮೇಲೆ ಹೋದವನು ಮರಳಿ ವಾಪಸ್ ಬಂದಿಲ್ಲ. ಶನಿವಾರ, ಭಾನುವಾರ, ಸೋಮವಾರ ಕಾದರೂ ಅರುಣ್ ವಾಪಸ್ ಬಾರದ ಹಿನ್ನೆಲೆ ಅನುಮಾನಗೊಂಡ ಹೆಲ್ಮೆಟ್ ಲಾಕ್ ರೂಂ ಮಾಲೀಕರು, ಪೊಲೀಸರಿಗೆ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದಾಗ ಅರುಣ್ ಹೋಗಿರೋ ವೀಡಿಯೋ ಸಿಕ್ಕಿದೆ. ಆದರೆ ವಾಪಾಸ್ ಬಂದಿರೋ ವೀಡಿಯೋ ಸಿಕ್ಕಿಲ್ಲ. ಹೀಗಾಗಿ ಬೆಟ್ಟವೆಲ್ಲಾ ತಡಿಕಾಡಿದಾಗ ಟಿಪ್ಪು ಡ್ರಾಪ್‌ನ ಜಾಗದಲ್ಲಿ ಅರುಣ್ ಬ್ಯಾಗ್ ಪತ್ತೆಯಾಗಿದೆ.

ಬ್ಯಾಗ್‌ನಲ್ಲಿ ಡೆತ್‌ನೋಟ್ ಸಹ ಪತ್ತೆಯಾಗಿದ್ದು, ಅದರಲ್ಲಿ ಸಾವಿಗೆ ನಿಖರ ಕಾರಣ ಬರೆದಿಲ್ಲ. “ತಾನು ಸಂತೋಷವಾಗಿ ಸಾಯುತ್ತಿದ್ದೇನೆ. ರಾಜಕೀಯ ವ್ಯವಸ್ಥೆ ಸರಿ ಇಲ್ಲ. ನಟ ಉಪೇಂದ್ರ ಅವರ ಪ್ರಜಾಕೀಯ ಪಕ್ಷದ ಸಿದ್ದಾಂತಗಳನ್ನ ಜನ ಬೆಂಬಲಿಸಿಬೇಕು” ಎಂದು ಡೆತ್‌ನೋಟ್‌ನಲ್ಲಿ ಯುವಕ ಬರೆದಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿ ನಿವಾಸಿಯಾಗಿದ್ದು, ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಸ್ನೇಹಿತರ ಜೊತೆ ಪಿಜಿಯಲ್ಲಿ ಉಳಿದುಕೊಂಡಿದ್ದ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

13 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

19 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

23 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago