ಪ್ರೇಯಸಿಗಾಗಿ ಹಾಲಿ ಹಾಗೂ ಮಾಜಿ ನಡುವೆ ಕಿತ್ತಾಟ: “ನಾನು ಪ್ರೀತಿಸುವ ಹುಡುಗಿನೇ ಬೇಕೆನೋ” ಎಂದು ಮಾಜಿಗೆ ಥಳಿಸಿದ ಹಾಲಿ ಪ್ರಿಯಕರ: ಹಲ್ಲೆ ದೃಶ್ಯ ಬಾರ್ ಸಿಸಿ ಕ್ಯಾಮೆರದಲ್ಲಿ ಸೆರೆ

ದೊಡ್ಡಬಳ್ಳಾಪುರ: ಪ್ರೇಮಿಗಾಗಿ ಇಬ್ಬರು ಯುವಕರ(ಮಾಜಿ ಹಾಗೂ ಹಾಲಿ) ನಡುವೆ ನಗರದ ಶಾಂತಿನಗರ ಭಾರ್ಗವಿ ಬಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಮಚ್ಚು, ಲಾಂಗ್‌ಳಿಂದ ನಡೆದ ಹಲ್ಲೆ ಪ್ರಕರಣ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರದ ಸೋಮಶೇಖರ ಮೇಲೆ ನಾಹೀದ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹಲವು ದಿನಗಳಿಂದ ಯುವತಿಯೊಬ್ಬಳನ್ನು ಸೋಮಶೇಖರ್ ಪ್ರೀತಿಸುತ್ತಿದ್ದನು. ಬಳಿಕ ಯುವತಿ ಸೋಮಶೇಖರ್ ನನ್ನು ಬಿಟ್ಟು ನಾಹೀದ್ ಎಂಬಾತನ ಜತೆ ಗೆಳೆತನ ಮಾಡಿದ್ದಳು ಎನ್ನಲಾಗಿದೆ. ಇದೇ ವಿಚಾರವಾಗಿ ಸೋಮಶೇಖರ್, ಯುವತಿಯನ್ನು ಪ್ರಶ್ನಿಸಿದಕ್ಕೆ ನಾಹೀದ್ ಗುಂಪು ಕಟ್ಟಿಕೊಂಡು ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಬಾರ್‌ನಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗುಂಪುಗಳ ನಡುವಿನ ಘರ್ಷಣೆ ಕಂಡು ಜನರು ಬೆಚ್ಚಿ ಬಿದ್ದಿದ್ದು. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲೇನಿದೆ…

ನಾನು ಎರಡು ವರ್ಷಗಳಿಂದ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದೆ. ಕಳೆದ ಮೂರು ತಿಂಗಳಿಂದೆ ಆ ಯುವತಿ ನನ್ನ ಬಿಟ್ಟು ನಾಹಿದ್ ನನ್ನು ಪ್ರೀತಿ ಮಾಡೋದಕ್ಕೆ ಶುರು ಮಾಡಿದ್ದಳು. ಕಳೆದ ಒಂದು ತಿಂಗಳಿಂದೆ ಆ ಯುವತಿ ನನಗೆ ಫೋನ್ ಮಾಡಿ ನಿನ್ನ ಮದುವೆಯಾಗಲೂ ಇಷ್ಟ ಇಲ್ಲ ನೀನು ಯಾರನ್ನಾದರೂ ನೋಡಿಕೋ ಎಂದು ಹೇಳಿದ್ದು ನಾನು ಸಹ ಅದಕ್ಕೆ ಒಪ್ಪಿಕೊಂಡು ನನ್ನ ಪಾಡಿಗೆ ನಾನು ಸುಮ್ಮನಾಗಿದ್ದೆ.

ಈಗಿದ್ದಾಗ ಏ.2ರ ಸಂಜೆ 6:30ರಲ್ಲಿ‌ ನಾನು ನನ್ನ ಸ್ನೇಹಿತಿ ಮನೆಗೆ ಹೋಗುವಾಗ ನಾಹಿದ್ ನನ್ನ ಮೇಲೆ ಹಲ್ಲೆ ನಡೆಸಲು‌ ಬಂದಾಗ ಆಗ ನಾನು ಅಲ್ಲೇ‌ ಇದ್ದ ಬಾರ್ ಒಳಗೆ ಹೋದೆ. ಆದರೂ ಅವರು ನನ್ನನ್ನು ಬಿಡದೇ ನಿನಗೆ ನಾನು ಪ್ರೀತಿಸುವ ಹುಡುಗಿನೇ ಬೇಕೆನೋ ಎಂದು ಅವಾಚ್ಯ ಶಬ್ದಗಳಿಂದ ಬೈಯು, ಹಲ್ಲೆ‌‌ ನಡೆಸಿ‌ದ್ದಾರೆ ಎಂದು ಸೋಮಶೇಖರ್‌‌ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು‌ ಮಾಡಿದ್ದಾನೆ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

21 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

1 day ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

2 days ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

2 days ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 days ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago