ಪ್ರೇಯಸಿಗಾಗಿ ಹಾಲಿ ಹಾಗೂ ಮಾಜಿ ನಡುವೆ ಕಿತ್ತಾಟ: “ನಾನು ಪ್ರೀತಿಸುವ ಹುಡುಗಿನೇ ಬೇಕೆನೋ” ಎಂದು ಮಾಜಿಗೆ ಥಳಿಸಿದ ಹಾಲಿ ಪ್ರಿಯಕರ: ಹಲ್ಲೆ ದೃಶ್ಯ ಬಾರ್ ಸಿಸಿ ಕ್ಯಾಮೆರದಲ್ಲಿ ಸೆರೆ

ದೊಡ್ಡಬಳ್ಳಾಪುರ: ಪ್ರೇಮಿಗಾಗಿ ಇಬ್ಬರು ಯುವಕರ(ಮಾಜಿ ಹಾಗೂ ಹಾಲಿ) ನಡುವೆ ನಗರದ ಶಾಂತಿನಗರ ಭಾರ್ಗವಿ ಬಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಮಚ್ಚು, ಲಾಂಗ್‌ಳಿಂದ ನಡೆದ ಹಲ್ಲೆ ಪ್ರಕರಣ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರದ ಸೋಮಶೇಖರ ಮೇಲೆ ನಾಹೀದ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹಲವು ದಿನಗಳಿಂದ ಯುವತಿಯೊಬ್ಬಳನ್ನು ಸೋಮಶೇಖರ್ ಪ್ರೀತಿಸುತ್ತಿದ್ದನು. ಬಳಿಕ ಯುವತಿ ಸೋಮಶೇಖರ್ ನನ್ನು ಬಿಟ್ಟು ನಾಹೀದ್ ಎಂಬಾತನ ಜತೆ ಗೆಳೆತನ ಮಾಡಿದ್ದಳು ಎನ್ನಲಾಗಿದೆ. ಇದೇ ವಿಚಾರವಾಗಿ ಸೋಮಶೇಖರ್, ಯುವತಿಯನ್ನು ಪ್ರಶ್ನಿಸಿದಕ್ಕೆ ನಾಹೀದ್ ಗುಂಪು ಕಟ್ಟಿಕೊಂಡು ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಬಾರ್‌ನಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗುಂಪುಗಳ ನಡುವಿನ ಘರ್ಷಣೆ ಕಂಡು ಜನರು ಬೆಚ್ಚಿ ಬಿದ್ದಿದ್ದು. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲೇನಿದೆ…

ನಾನು ಎರಡು ವರ್ಷಗಳಿಂದ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದೆ. ಕಳೆದ ಮೂರು ತಿಂಗಳಿಂದೆ ಆ ಯುವತಿ ನನ್ನ ಬಿಟ್ಟು ನಾಹಿದ್ ನನ್ನು ಪ್ರೀತಿ ಮಾಡೋದಕ್ಕೆ ಶುರು ಮಾಡಿದ್ದಳು. ಕಳೆದ ಒಂದು ತಿಂಗಳಿಂದೆ ಆ ಯುವತಿ ನನಗೆ ಫೋನ್ ಮಾಡಿ ನಿನ್ನ ಮದುವೆಯಾಗಲೂ ಇಷ್ಟ ಇಲ್ಲ ನೀನು ಯಾರನ್ನಾದರೂ ನೋಡಿಕೋ ಎಂದು ಹೇಳಿದ್ದು ನಾನು ಸಹ ಅದಕ್ಕೆ ಒಪ್ಪಿಕೊಂಡು ನನ್ನ ಪಾಡಿಗೆ ನಾನು ಸುಮ್ಮನಾಗಿದ್ದೆ.

ಈಗಿದ್ದಾಗ ಏ.2ರ ಸಂಜೆ 6:30ರಲ್ಲಿ‌ ನಾನು ನನ್ನ ಸ್ನೇಹಿತಿ ಮನೆಗೆ ಹೋಗುವಾಗ ನಾಹಿದ್ ನನ್ನ ಮೇಲೆ ಹಲ್ಲೆ ನಡೆಸಲು‌ ಬಂದಾಗ ಆಗ ನಾನು ಅಲ್ಲೇ‌ ಇದ್ದ ಬಾರ್ ಒಳಗೆ ಹೋದೆ. ಆದರೂ ಅವರು ನನ್ನನ್ನು ಬಿಡದೇ ನಿನಗೆ ನಾನು ಪ್ರೀತಿಸುವ ಹುಡುಗಿನೇ ಬೇಕೆನೋ ಎಂದು ಅವಾಚ್ಯ ಶಬ್ದಗಳಿಂದ ಬೈಯು, ಹಲ್ಲೆ‌‌ ನಡೆಸಿ‌ದ್ದಾರೆ ಎಂದು ಸೋಮಶೇಖರ್‌‌ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು‌ ಮಾಡಿದ್ದಾನೆ.

Ramesh Babu

Journalist

Recent Posts

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

14 minutes ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

48 minutes ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

7 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

8 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ” ರಘು ದೀಕ್ಷಿತ್ ಸಂಗೀತದೊಂದಿಗೆ ತೆರೆ: ಮಹಿಳೆಯರ ಮನ ಗೆದ್ದ ಸ್ಯಾರಿ ಸಂತೆ: 2 ಕೋಟಿಗೂ ಅಧಿಕ ವಹಿವಾಟು

ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…

19 hours ago

ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿ ಮಾರಾಟ ಮಾಡುತ್ತಿದ್ದ ದಂಪತಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ.!

ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…

1 day ago