ಪ್ರೇಯಸಿಗಾಗಿ ಹಾಲಿ ಹಾಗೂ ಮಾಜಿ ನಡುವೆ ಕಿತ್ತಾಟ: “ನಾನು ಪ್ರೀತಿಸುವ ಹುಡುಗಿನೇ ಬೇಕೆನೋ” ಎಂದು ಮಾಜಿಗೆ ಥಳಿಸಿದ ಹಾಲಿ ಪ್ರಿಯಕರ: ಹಲ್ಲೆ ದೃಶ್ಯ ಬಾರ್ ಸಿಸಿ ಕ್ಯಾಮೆರದಲ್ಲಿ ಸೆರೆ

ದೊಡ್ಡಬಳ್ಳಾಪುರ: ಪ್ರೇಮಿಗಾಗಿ ಇಬ್ಬರು ಯುವಕರ(ಮಾಜಿ ಹಾಗೂ ಹಾಲಿ) ನಡುವೆ ನಗರದ ಶಾಂತಿನಗರ ಭಾರ್ಗವಿ ಬಾರ್‌ನಲ್ಲಿ ಸಿನಿಮೀಯ ರೀತಿಯಲ್ಲಿ ಮಚ್ಚು, ಲಾಂಗ್‌ಳಿಂದ ನಡೆದ ಹಲ್ಲೆ ಪ್ರಕರಣ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಗರದ ಸೋಮಶೇಖರ ಮೇಲೆ ನಾಹೀದ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಹಲವು ದಿನಗಳಿಂದ ಯುವತಿಯೊಬ್ಬಳನ್ನು ಸೋಮಶೇಖರ್ ಪ್ರೀತಿಸುತ್ತಿದ್ದನು. ಬಳಿಕ ಯುವತಿ ಸೋಮಶೇಖರ್ ನನ್ನು ಬಿಟ್ಟು ನಾಹೀದ್ ಎಂಬಾತನ ಜತೆ ಗೆಳೆತನ ಮಾಡಿದ್ದಳು ಎನ್ನಲಾಗಿದೆ. ಇದೇ ವಿಚಾರವಾಗಿ ಸೋಮಶೇಖರ್, ಯುವತಿಯನ್ನು ಪ್ರಶ್ನಿಸಿದಕ್ಕೆ ನಾಹೀದ್ ಗುಂಪು ಕಟ್ಟಿಕೊಂಡು ಲಾಂಗ್‌ನಿಂದ ಹಲ್ಲೆ ನಡೆಸಿದ್ದಾರೆ ಎಂದು ಬಾರ್‌ನಲ್ಲಿದ್ದ ಇತರ ಗ್ರಾಹಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗುಂಪುಗಳ ನಡುವಿನ ಘರ್ಷಣೆ ಕಂಡು ಜನರು ಬೆಚ್ಚಿ ಬಿದ್ದಿದ್ದು. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರಿನಲ್ಲೇನಿದೆ…

ನಾನು ಎರಡು ವರ್ಷಗಳಿಂದ ಒಬ್ಬ ಯುವತಿಯನ್ನು ಪ್ರೀತಿಸುತ್ತಿದ್ದೆ. ಕಳೆದ ಮೂರು ತಿಂಗಳಿಂದೆ ಆ ಯುವತಿ ನನ್ನ ಬಿಟ್ಟು ನಾಹಿದ್ ನನ್ನು ಪ್ರೀತಿ ಮಾಡೋದಕ್ಕೆ ಶುರು ಮಾಡಿದ್ದಳು. ಕಳೆದ ಒಂದು ತಿಂಗಳಿಂದೆ ಆ ಯುವತಿ ನನಗೆ ಫೋನ್ ಮಾಡಿ ನಿನ್ನ ಮದುವೆಯಾಗಲೂ ಇಷ್ಟ ಇಲ್ಲ ನೀನು ಯಾರನ್ನಾದರೂ ನೋಡಿಕೋ ಎಂದು ಹೇಳಿದ್ದು ನಾನು ಸಹ ಅದಕ್ಕೆ ಒಪ್ಪಿಕೊಂಡು ನನ್ನ ಪಾಡಿಗೆ ನಾನು ಸುಮ್ಮನಾಗಿದ್ದೆ.

ಈಗಿದ್ದಾಗ ಏ.2ರ ಸಂಜೆ 6:30ರಲ್ಲಿ‌ ನಾನು ನನ್ನ ಸ್ನೇಹಿತಿ ಮನೆಗೆ ಹೋಗುವಾಗ ನಾಹಿದ್ ನನ್ನ ಮೇಲೆ ಹಲ್ಲೆ ನಡೆಸಲು‌ ಬಂದಾಗ ಆಗ ನಾನು ಅಲ್ಲೇ‌ ಇದ್ದ ಬಾರ್ ಒಳಗೆ ಹೋದೆ. ಆದರೂ ಅವರು ನನ್ನನ್ನು ಬಿಡದೇ ನಿನಗೆ ನಾನು ಪ್ರೀತಿಸುವ ಹುಡುಗಿನೇ ಬೇಕೆನೋ ಎಂದು ಅವಾಚ್ಯ ಶಬ್ದಗಳಿಂದ ಬೈಯು, ಹಲ್ಲೆ‌‌ ನಡೆಸಿ‌ದ್ದಾರೆ ಎಂದು ಸೋಮಶೇಖರ್‌‌ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲು‌ ಮಾಡಿದ್ದಾನೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

9 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

9 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

12 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago