ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…