ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…