ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…