ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…