ಜೀವ ಕಳೆದುಕೊಂಡಾಗ ಮಾತ್ರ ಜೀವನದ ಮೌಲ್ಯ ಏನೆಂಬುದು ತಿಳಿಯುತ್ತದೆ. ಅನೇಕ ಬಾರಿ ಪ್ರೀತಿಯಲ್ಲಿ ಸೋತಾಗ ಅಥವಾ ಜೀವನದಲ್ಲಿ ಹತಾಶೆಗೊಂಡಾಗ ಆತ್ಮಹತ್ಯೆಗೆ ಮುಂದಾಗುತ್ತಾರೆ. ಆದರೆ, ಈ ಜೀವನವನ್ನು ಪಡೆಯುವುದು ಎಷ್ಟು ಕಷ್ಟ ಎಂದು ಅವರಿಗೆ ತಿಳಿದಿರುವುದಿಲ್ಲ. ಉತ್ತರಪ್ರದೇಶದ ಸುಲ್ತಾನ್ಪುರದಿಂದ ಅಂತಹ ಒಂದು ವೀಡಿಯೊ ಹೊರಬಿದ್ದಿದೆ, ಅಲ್ಲಿ ಪ್ರೀತಿಯಲ್ಲಿದ್ದ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರು, ಆದರೆ ಮೀನುಗಾರರೊಬ್ಬರು ಜೋಡಿಯನ್ನ ರಕ್ಷಣೆ ಮಾಡಿದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನಿಗೆ ಕಪಾಳಮೋಕ್ಷ ಮಾಡಿ ಬುದ್ದಿ ಹೇಳಿದ್ದಾನೆ.
ಈ ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಯುವಕ ಮತ್ತು ಯುವತಿಯನ್ನು ಮೀನುಗಾರನೊಬ್ಬ ರಕ್ಷಿಸಿ ಯುವಕನ ಕೆನ್ನೆಗೆ ಭಾರಿಸಿದ್ದಾನೆ. ಜೀವ ಉಳಿಸಿದ ಈ ಆಘಾತಕಾರಿ ಪ್ರಕರಣ ಉತ್ತರಪ್ರದೇಶದ ಸುಲ್ತಾನ್ಪುರದಲ್ಲಿ ನಡೆದಿದೆ.
ಜೋಡಿಯೊಂದು ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಗೋಮತಿ ನದಿಗೆ ಹಾರಿದರು, ಆದರೆ ಅಲ್ಲಿದ್ದ ಮೀನುಗಾರರು ಜೋಡಿಯ ಪ್ರಾಣವನ್ನು ಉಳಿಸಿಕೊಂಡರು. ಆದರೆ, ಇದಾದ ಬಳಿಕ ಯುವಕನಿಗೆ ಬಲವಾಗಿ ಕಪಾಳಮೋಕ್ಷ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…