Categories: ಹಾಸನ

ಪ್ರೊಬೆಷನರಿ ಐಪಿಎಸ್ ಅಧಿಕಾರಿ ಜೀಪ್ ಅಪಘಾತದಲ್ಲಿ ಸಾವು: ಹಾಸನದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯಕ್ಕೆ ಇಂದು ಹಾಜರಾಗಬೇಕಿತ್ತು: ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ಹರ್ಷವರ್ಧನ್

ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ನಿನ್ನೆ ಸಂಜೆ 4.30ರ ವೇಳೆಗೆ ಜೀಪ್ ನ ಟೈರ್ ಸ್ಫೋಟಗೊಂಡು ಜೀಪ್ ಮೂರು ಸುತ್ತು ಉರುಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಹಾಸನ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.

ಹರ್ಷವರ್ಧನ್ (25), ಮೃತ ದುರ್ದೈವಿ. ಹರ್ಷವರ್ಧನ್ ಮೂಲತಃ ಬಿಹಾರದ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಪಡೆದು 2022-23 ರ ಐಪಿಎಸ್ ಬ್ಯಾಚ್ ನಲ್ಲಿ ತೇರ್ಗಡೆ ಹೊಂದಿದ್ದ ಇವರು, ಕರ್ನಾಟಕ ಕೇಡರ್ ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು.

ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.

ಘಟನೆ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.

ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ‌ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.

ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು -ಸಿಎಂ ಸಿದ್ದರಾಮಯ್ಯ ಟ್ವೀಟ್

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

3 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

3 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

3 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

15 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

15 hours ago