ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು. ಮೈಸೂರಿನ ದಕ್ಷಿಣ ವಲಯ ಐಜಿ ಅವರ ಬಳಿ ವರದಿ ಮಾಡಿಕೊಂಡು ಹಾಸನಕ್ಕೆ ಜೀಪ್ ನಲ್ಲಿ ಬರುವಾಗ ಕಿತ್ತಾನೆ ಬಳಿ ನಿನ್ನೆ ಸಂಜೆ 4.30ರ ವೇಳೆಗೆ ಜೀಪ್ ನ ಟೈರ್ ಸ್ಫೋಟಗೊಂಡು ಜೀಪ್ ಮೂರು ಸುತ್ತು ಉರುಳಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಇಹಲೋಕ ತ್ಯಜಿಸಿದ ದಾರುಣ ಘಟನೆ ಹಾಸನ ತಾಲೂಕಿನ ಕಿತ್ತಾನೆಗಡಿ ಬಳಿ ಸಂಭವಿಸಿದೆ.
ಮೃತರ ತಂದೆ ಕೂಡ ಐಎಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಮೂಲ ತಿಳಿಸಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.
ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು -ಸಿಎಂ ಸಿದ್ದರಾಮಯ್ಯ ಟ್ವೀಟ್
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…