ಪ್ರೊ.ಜಿ.ಎಸ್.ಸಿದ್ದಲಿಂಗಯ್ಯನವರಿಂದ ಪರಿಷತ್ತು ಸರ್ವತೋಮುಖ ಬೆಳವಣಿಗೆ ಆಯಿತು-ಪ್ರೊ.ರವಿಕಿರಣ್

ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು  ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್‌ ಕಲಾಮಂದಿರ ಆವರಣದಲ್ಲಿ ನಡೆದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು   ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು ಧ್ವಜ ರೂಪಗೊಂಡಿತು. ನಾಡಗೀತೆ ಹಾಡುವ ಅವಧಿಗೆ ಬಗ್ಗೆ  ಹೆಚ್ಚು ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರಕಟಣೆ ಯಶಸ್ವಿಯಾಗಿ ನಡೆದವು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ ಜನಿಸಿದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡದ ಪ್ರಾಧ್ಯಾಪಕರಾಗಿ, ಕಾಲೇಜು ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿ, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಬೆಂಗಳೂರು, ಮೈಸೂರು, ಕರ್ನಾಟಕ, ಕಲಬುರಗಿ ಮತ್ತು ಮಂಗಳೂರು ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,   ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ಅವರು  ಕವಿ, ವಿಮರ್ಶಕ, ಸಂಶೋಧಕ, ಅನುವಾದಕರಾಗಿ ಹಲವಾರು ಅಮೂಲ್ಯ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ  ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ,  ವಚನ ಸಾಹಿತ್ಯಶ್ರೀ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ,  ಬಸವಶ್ರೀ ಪ್ರಶಸ್ತಿ,  ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ನಾಗರತ್ನಮ್ಮ, ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಇಸ್ತೂರು  ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಸಹಶಿಕ್ಷಕರುಗಳಾದ ಕೋದಂಡರಾಮ್, ತಿಮ್ಮಯ್ಯ, ವೆಂಕಟೇಶ್, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

14 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

17 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

17 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago