ಪ್ರೊ.ಜಿ.ಎಸ್.ಸಿದ್ದಲಿಂಗಯ್ಯನವರಿಂದ ಪರಿಷತ್ತು ಸರ್ವತೋಮುಖ ಬೆಳವಣಿಗೆ ಆಯಿತು-ಪ್ರೊ.ರವಿಕಿರಣ್

ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು  ಸರ್ವತೋಮುಖ ಬೆಳವಣಿಗೆ ಆಯಿತು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ರವಿಕಿರಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್‌ ಕಲಾಮಂದಿರ ಆವರಣದಲ್ಲಿ ನಡೆದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು   ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪರಿಷತ್ತು ಧ್ವಜ ರೂಪಗೊಂಡಿತು. ನಾಡಗೀತೆ ಹಾಡುವ ಅವಧಿಗೆ ಬಗ್ಗೆ  ಹೆಚ್ಚು ಮಾಡಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಪುಸ್ತಕ ಪ್ರಕಟಣೆ ಯಶಸ್ವಿಯಾಗಿ ನಡೆದವು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ಮಾತನಾಡಿ, ತುಮಕೂರು ಜಿಲ್ಲೆಯ ಬೆಳ್ಳಾವೆಯಲ್ಲಿ ಜನಿಸಿದ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ಅವರು ಕನ್ನಡದ ಪ್ರಾಧ್ಯಾಪಕರಾಗಿ, ಕಾಲೇಜು ಪ್ರಾಂಶುಪಾಲರಾಗಿ, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ನಿರ್ದೇಶಕರಾಗಿ, ಹಂಪಿ ವಿಶ್ವವಿದ್ಯಾನಿಲಯದಲ್ಲಿ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು.

ಬೆಂಗಳೂರು, ಮೈಸೂರು, ಕರ್ನಾಟಕ, ಕಲಬುರಗಿ ಮತ್ತು ಮಂಗಳೂರು ವಿಶ್ವವಿದ್ಯಾಲಯಗಳ ಅಕಾಡೆಮಿಕ್ ಕೌನ್ಸಿಲ್, ಸೆನೆಟ್ ಮತ್ತು ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದರು ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,   ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ  ಅವರು  ಕವಿ, ವಿಮರ್ಶಕ, ಸಂಶೋಧಕ, ಅನುವಾದಕರಾಗಿ ಹಲವಾರು ಅಮೂಲ್ಯ ಕೃತಿಗಳನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅವರ  ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ, ಕಾವ್ಯಾನಂದ ಪ್ರಶಸ್ತಿ,  ವಚನ ಸಾಹಿತ್ಯಶ್ರೀ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ,  ಬಸವಶ್ರೀ ಪ್ರಶಸ್ತಿ,  ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಪ್ರತಿನಿಧಿ ನಾಗರತ್ನಮ್ಮ, ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್  ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಅಣ್ಣಯ್ಯ, ಇಸ್ತೂರು  ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ, ಸಹಶಿಕ್ಷಕರುಗಳಾದ ಕೋದಂಡರಾಮ್, ತಿಮ್ಮಯ್ಯ, ವೆಂಕಟೇಶ್, ಶ್ರೀನಿವಾಸ್ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 hour ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

5 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

7 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

18 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

19 hours ago