ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ ಹೋರಾಟ ಸದಾ ಅವಿಸ್ಮರಣೀಯ ಎಂದು ಘಾಟಿ ಸುಬ್ರಹ್ಮಣ್ಯ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪ ರವರ 80ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕೃಷ್ಣಪ್ಪ ಅವರು ಅಂಬೇಡ್ಕರ್ ಚಿಂತನೆಗಳನ್ನು ಅನುಸರಿಸಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಬಗ್ಗೆ ಪ್ರತಿಪಾದಿಸಿದರು. ಕೃಷ್ಣಪ್ಪ ಅವರು ಶಿಕ್ಷಣ, ಸಂಘಟನೆ, ಹೋರಾಟದ ಸಿದ್ದಾಂತದೊಂದಿಗೆ ಸಾಕಷ್ಟು ಹೋರಾಟಗಳನ್ನು ನಡೆಸಿ, ದಲಿತ ಸಮುದಾಯದ ಏಳಿಗೆಗೆ ದುಡಿದವರಲ್ಲಿ ಪ್ರಮುಖರು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು) ಮಾತನಾಡಿ, ಪ್ರೊ.ಬಿ ಕೃಷ್ಣಪ್ಪ ಅವರು ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕರು, ಸಾಮಾಜಿಕ ಹೋರಾಟಗಾರರು ಮತ್ತು ಪ್ರಖರ ಸಾಹಿತಿಯಾಗಿದ್ದರು. ಇವರು ಕರ್ನಾಟಕದಲ್ಲಿ ದಲಿತರು, ದಮನಿತರು ಮತ್ತು ಶೋಷಿತರ ಹಕ್ಕುಗಳಿಗಾಗಿ ಧ್ವನಿ ಎತ್ತಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದರು. ಇವರು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿ 1970ರ ದಶಕದಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಬಿತ್ತಿದರು. ಶೋಷಿತ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು. ರಾಜ್ಯದ ನಾನಾ ಕಡೆಗಳಲ್ಲಿ ಹೋರಾಟ ನಡೆಸಿದರು ಎಂದು ಹೇಳಿದರು.

ಈ ವೇಳೆ ಮುಖಂಡರಾದ ಆರ್.ವಿ ಶಿವಕುಮಾರ್, ಜಿಲ್ಲಾ ಸಂಚಾಲಕ ರಾಮಮೂರ್ತಿ ಬೈಲಾಂಜಿನಮೂರ್ತಿ, ಶ್ರೀನಿವಾಸ ಎನ್, ಪೂಜರಂಗಯ್ಯ, ಮಾರಪ್ಪ, ಹನುಮಂತರಾಯಪ್ಪ, ಓಬಳೇಶ್, ಸುಬ್ಬು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ನಾಗರತ್ನಮ್ಮ, ಆಶಾ, ಪ್ರೇಮಾ, ವಿದ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

2 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

3 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

5 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

15 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

15 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

19 hours ago