ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ ಹೋರಾಟ ಸದಾ ಅವಿಸ್ಮರಣೀಯ ಎಂದು ಘಾಟಿ ಸುಬ್ರಹ್ಮಣ್ಯ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪ ರವರ 80ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕೃಷ್ಣಪ್ಪ ಅವರು ಅಂಬೇಡ್ಕರ್ ಚಿಂತನೆಗಳನ್ನು ಅನುಸರಿಸಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಬಗ್ಗೆ ಪ್ರತಿಪಾದಿಸಿದರು. ಕೃಷ್ಣಪ್ಪ ಅವರು ಶಿಕ್ಷಣ, ಸಂಘಟನೆ, ಹೋರಾಟದ ಸಿದ್ದಾಂತದೊಂದಿಗೆ ಸಾಕಷ್ಟು ಹೋರಾಟಗಳನ್ನು ನಡೆಸಿ, ದಲಿತ ಸಮುದಾಯದ ಏಳಿಗೆಗೆ ದುಡಿದವರಲ್ಲಿ ಪ್ರಮುಖರು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು) ಮಾತನಾಡಿ, ಪ್ರೊ.ಬಿ ಕೃಷ್ಣಪ್ಪ ಅವರು ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕರು, ಸಾಮಾಜಿಕ ಹೋರಾಟಗಾರರು ಮತ್ತು ಪ್ರಖರ ಸಾಹಿತಿಯಾಗಿದ್ದರು. ಇವರು ಕರ್ನಾಟಕದಲ್ಲಿ ದಲಿತರು, ದಮನಿತರು ಮತ್ತು ಶೋಷಿತರ ಹಕ್ಕುಗಳಿಗಾಗಿ ಧ್ವನಿ ಎತ್ತಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದರು. ಇವರು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿ 1970ರ ದಶಕದಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಬಿತ್ತಿದರು. ಶೋಷಿತ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು. ರಾಜ್ಯದ ನಾನಾ ಕಡೆಗಳಲ್ಲಿ ಹೋರಾಟ ನಡೆಸಿದರು ಎಂದು ಹೇಳಿದರು.

ಈ ವೇಳೆ ಮುಖಂಡರಾದ ಆರ್.ವಿ ಶಿವಕುಮಾರ್, ಜಿಲ್ಲಾ ಸಂಚಾಲಕ ರಾಮಮೂರ್ತಿ ಬೈಲಾಂಜಿನಮೂರ್ತಿ, ಶ್ರೀನಿವಾಸ ಎನ್, ಪೂಜರಂಗಯ್ಯ, ಮಾರಪ್ಪ, ಹನುಮಂತರಾಯಪ್ಪ, ಓಬಳೇಶ್, ಸುಬ್ಬು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ನಾಗರತ್ನಮ್ಮ, ಆಶಾ, ಪ್ರೇಮಾ, ವಿದ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

6 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

12 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

13 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

1 day ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

1 day ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

1 day ago