ಪ್ರೊ. ಬಿ ಕೃಷ್ಣಪ್ಪ ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕ- ದಸಂಸ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು)

ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ ಹೋರಾಟ ಸದಾ ಅವಿಸ್ಮರಣೀಯ ಎಂದು ಘಾಟಿ ಸುಬ್ರಹ್ಮಣ್ಯ ಅಭಿವೃದ್ದಿ ಪ್ರಾಧಿಕಾರದ ಸದಸ್ಯ ಆರ್.ವಿ ಮಹೇಶ್ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಘಟಕದ ವತಿಯಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕ ಪ್ರೊ. ಬಿ ಕೃಷ್ಣಪ್ಪ ರವರ 80ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕೃಷ್ಣಪ್ಪ ಅವರು ಅಂಬೇಡ್ಕರ್ ಚಿಂತನೆಗಳನ್ನು ಅನುಸರಿಸಿ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಎಲ್ಲರಿಗೂ ಶಿಕ್ಷಣ ಸಿಗಬೇಕು ಎಂಬ ಬಗ್ಗೆ ಪ್ರತಿಪಾದಿಸಿದರು. ಕೃಷ್ಣಪ್ಪ ಅವರು ಶಿಕ್ಷಣ, ಸಂಘಟನೆ, ಹೋರಾಟದ ಸಿದ್ದಾಂತದೊಂದಿಗೆ ಸಾಕಷ್ಟು ಹೋರಾಟಗಳನ್ನು ನಡೆಸಿ, ದಲಿತ ಸಮುದಾಯದ ಏಳಿಗೆಗೆ ದುಡಿದವರಲ್ಲಿ ಪ್ರಮುಖರು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ರಾಮಮೂರ್ತಿ(ರಾಮು) ಮಾತನಾಡಿ, ಪ್ರೊ.ಬಿ ಕೃಷ್ಣಪ್ಪ ಅವರು ಕರ್ನಾಟಕದ ಪ್ರಮುಖ ದಲಿತ ಚಳವಳಿಯ ಧೀಮಂತ ನಾಯಕರು, ಸಾಮಾಜಿಕ ಹೋರಾಟಗಾರರು ಮತ್ತು ಪ್ರಖರ ಸಾಹಿತಿಯಾಗಿದ್ದರು. ಇವರು ಕರ್ನಾಟಕದಲ್ಲಿ ದಲಿತರು, ದಮನಿತರು ಮತ್ತು ಶೋಷಿತರ ಹಕ್ಕುಗಳಿಗಾಗಿ ಧ್ವನಿ ಎತ್ತಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಿದರು. ಇವರು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳಿಂದ ಪ್ರೇರಿತರಾಗಿ 1970ರ ದಶಕದಲ್ಲಿ ಕರ್ನಾಟಕದ ಮೂಲೆ ಮೂಲೆಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳನ್ನು ಬಿತ್ತಿದರು. ಶೋಷಿತ ಸಮುದಾಯಗಳಿಗೆ ಸಂವಿಧಾನಬದ್ಧ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು. ರಾಜ್ಯದ ನಾನಾ ಕಡೆಗಳಲ್ಲಿ ಹೋರಾಟ ನಡೆಸಿದರು ಎಂದು ಹೇಳಿದರು.

ಈ ವೇಳೆ ಮುಖಂಡರಾದ ಆರ್.ವಿ ಶಿವಕುಮಾರ್, ಜಿಲ್ಲಾ ಸಂಚಾಲಕ ರಾಮಮೂರ್ತಿ ಬೈಲಾಂಜಿನಮೂರ್ತಿ, ಶ್ರೀನಿವಾಸ ಎನ್, ಪೂಜರಂಗಯ್ಯ, ಮಾರಪ್ಪ, ಹನುಮಂತರಾಯಪ್ಪ, ಓಬಳೇಶ್, ಸುಬ್ಬು, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಉಮಾದೇವಿ, ನಾಗರತ್ನಮ್ಮ, ಆಶಾ, ಪ್ರೇಮಾ, ವಿದ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

10 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

21 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

21 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago