2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ:https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…
ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…