2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.
ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ:https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.
ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.
ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…