ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟು (6 ರಿಂದ 10ನೇ ತರಗತಿ) ಗಳಿಗೆ ವಾರ್ಷಿಕ ರೂ. 10,000/- ದಂತೆ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇಲಾಖೆಯಲ್ಲಿ ಜಾರಿಯಲ್ಲಿದ್ದು, ಈ ಯೋಜನೆಯನ್ವಯ ಪ್ರಸ್ತುತ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ ಓದುತ್ತಿರುವ ಕ್ರೀಡಾಪಟುಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು.

ವಿದ್ಯಾರ್ಥಿ ವೇತನಕ್ಕಾಗಿ ಅರ್ಹ ಕ್ರೀಡಾಪಟುಗಳಿಂದ ಕಚೇರಿಯ ಅಧಿಕೃತ ಜಾಲತಾಣ:https://sevasindhuservices.karnataka.gov.in ಮೂಲಕ ಆನ್ಲೈನ್ನಲ್ಲಿ ಜೂನ್ 30 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿದಾರರು 2023-24ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲೆ (6 ರಿಂದ 10ನೇ ತರಗತಿ) ಯಲ್ಲಿ ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು ದಿನಾಂಕ 01.04.2023 ರಿಂದ 31.03.2024 ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ಅಂದರೆ ದಿನಾಂಕ 01-04-2023 ರಿಂದ 31-03-2024 ರ ಅವಧಿಯಲ್ಲಿ ನಡೆದ ಕ್ರೀಡಾಕೂಟಗಳಲ್ಲಿನ ಸಾಧನೆಗಳನ್ನು ಮಾತ್ರ ಪರಿಗಣಿಸಲಾಗುವುದು.

ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿವೇತನದ ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನದ ಮೊತ್ತವನ್ನು ವಾರ್ಷಿಕ ರೂ. 10,000 ರೂ ಗಳನ್ನು ಮಾತ್ರ ಮಂಜೂರು ಮಾಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

48 minutes ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

14 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

18 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago