Categories: ಕ್ರೀಡೆ

ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದ ದಬಾಂಗ್‌ ಡೆಲ್ಲಿ ಕೆ.ಸಿ

ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಟೇಬಲ್‌ ಟಾಪರ್‌ ದಬಾಂಗ್‌ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್‌ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್‌ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್‌ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್‌ ಜೋಗಿಂದರ್‌ ನರ್ವಾಲ್‌ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್‌ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.

ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.

Ramesh Babu

Journalist

Share
Published by
Ramesh Babu

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

2 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

2 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

5 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

13 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

15 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago