ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೇಬಲ್ ಟಾಪರ್ ದಬಾಂಗ್ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್ ಜೋಗಿಂದರ್ ನರ್ವಾಲ್ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.
ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…