Categories: ಕ್ರೀಡೆ

ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದ ದಬಾಂಗ್‌ ಡೆಲ್ಲಿ ಕೆ.ಸಿ

ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಟೇಬಲ್‌ ಟಾಪರ್‌ ದಬಾಂಗ್‌ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್‌ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್‌ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್‌ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್‌ ಜೋಗಿಂದರ್‌ ನರ್ವಾಲ್‌ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್‌ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.

ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.

Ramesh Babu

Journalist

Share
Published by
Ramesh Babu

Recent Posts

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

27 minutes ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

2 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

13 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

18 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

20 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

22 hours ago