ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೇಬಲ್ ಟಾಪರ್ ದಬಾಂಗ್ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್ ಜೋಗಿಂದರ್ ನರ್ವಾಲ್ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.
ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…
ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…