Categories: ಕ್ರೀಡೆ

ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದ ದಬಾಂಗ್‌ ಡೆಲ್ಲಿ ಕೆ.ಸಿ

ತ್ಯಾಗರಾಜ್‌ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್‌ ಪಂದ್ಯದಲ್ಲಿ ಟೇಬಲ್‌ ಟಾಪರ್‌ ದಬಾಂಗ್‌ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್‌ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್‌ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್‌ (ಪಿಕೆಎಲ್‌) 12ನೇ ಆವೃತ್ತಿಯ ಚಾಂಪಿಯನ್‌ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್‌ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್‌ ಜೋಗಿಂದರ್‌ ನರ್ವಾಲ್‌ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್‌ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.

ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.

Ramesh Babu

Journalist

Share
Published by
Ramesh Babu

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

10 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

14 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

21 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

22 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago