ತ್ಯಾಗರಾಜ್ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೇಬಲ್ ಟಾಪರ್ ದಬಾಂಗ್ ಡೆಲ್ಲಿ ತಂಡವು 3 ಅಂಕಗಳಿಂದ ಪುಣೇರಿ ಪಲ್ಟನ್ ವಿರುದ್ಧ (31-28 ಅಂತರದಲ್ಲಿ)ರೋಚಕ ಗೆಲುವು ಸಾಧಿಸಿತು. ಈ ಮೂಲಕ ದಬಾಂಗ್ ಡೆಲ್ಲಿ ಕೆ.ಸಿ ಪ್ರೋ ಕಬಡ್ಡಿ ಲೀಗ್ (ಪಿಕೆಎಲ್) 12ನೇ ಆವೃತ್ತಿಯ ಚಾಂಪಿಯನ್ ಪಟ್ಟಕ್ಕೇರಿದೆ. ಇದು ಅವರ ಎರಡನೇ ಪಿಕೆಎಲ್ ಪ್ರಶಸ್ತಿಯಾಗಿದೆ. ಈ ಹಿಂದೆ 8ನೇ ಆವೃತ್ತಿಯಲ್ಲಿ ಪ್ರಸ್ತುತ ಮುಖ್ಯ ಕೋಚ್ ಜೋಗಿಂದರ್ ನರ್ವಾಲ್ ಅವರು ನಾಯಕರಾಗಿದ್ದಾಗ ತಂಡ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡದ ಪರ ನೀರಜ್ ನರ್ವಾಲ್ 9 ಅಂಕ ಗಳಿಸಿದರು. ಅಜಿಂಕ್ಯ ಪವರ್ ಆರಂಕ ಕಲೆ ಹಾಕಿದರು.
ದಬಂಗ್, ತವರಿನಂಗಳದಲ್ಲಿ ಪ್ರಶಸ್ತಿ ಗೆದ್ದ ಎರಡನೇ ತಂಡ ಎನಿಸಿತು. ಎರಡನೇ ಆವೃತ್ತಿಯಲ್ಲಿ (2014) ಯು ಮುಂಬಾ ತಂಡವು ಮೊದಲ ಬಾರಿ ತನ್ನ ತವರಿನಲ್ಲೇ ಚಾಂಪಿಯನ್ ಆಗಿತ್ತು.
ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಡೆಲ್ಲಿ ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿತು. ಮೊದಲಾರ್ಧದಲ್ಲಿ 6 ಅಂಕಗಳ (20-14)ಮುನ್ನಡೆ ಪಡೆದ ಡೆಲ್ಲಿ ತಂಡಕ್ಕೆ ಉತ್ತರಾರ್ಧದಲ್ಲಿ ಪುಣೇರಿ ಪ್ರಬಲ ಸ್ಪರ್ಧೆಯೊಡ್ಡಿತು. ಅಂತಿಮವಾಗಿ 2023ರ ಚಾಂಪಿಯನ್ ಪುಣೇರಿ ತಂಡವು 3 ಅಂಕಗಳಿಂದ ಸೋತಿತು.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…