ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನ ಸರ್ಕಾರ ಕೈಬಿಡಬೇಕು- ಬೆ.ಗ್ರಾ ಪ.ಪೂ ಕಾ. ಪ್ರಾಂ. ಸಂಘದ ಅಧ್ಯಕ್ಷ ಜಿ.ದಯಾನಂದ್

ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುತ್ತಿದೆ. ಪ್ರಸ್ತುತ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎಂದು ಬದಲಾಯಿಸಿದೆ. ಪ್ರೌಢಶಾಲಾ  ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್   ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ‌ಮಾತನಾಡಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಲೀನವನ್ನು ಹಿಂಪಡೆದು ಪಿಯುಸಿ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಬೇಕಾಗಿದೆ. ಜಿಲ್ಲಾ ಹಂತಗಳಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾಪಂಚಾಯಿತಿಗೆ ವಹಿಸಿರುವ  ಸರ್ಕಾರದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು.   ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕೇತರನ್ನು  ನೇಮಕಾತಿ ಮಾಡಿಕೊಳ್ಳಬೇಕು ಎಂದರು.

ಪದವಿ ಪೂರ್ವ ಶಿಕ್ಷಣವು ಶಾಲಾಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಸೇತುವೆಯಾಗಿದೆ. ಹೊರ ರಾಜ್ಯಗಳ ಶಿಕ್ಷಣ ತಜ್ಞರು ಆಗಮಿಸಿ ನಮ್ಮ ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ಮಾಡುವುದನ್ನು ಗಮನಿಸಿದರೆ ನಮ್ಮ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆ ಎಷ್ಟು ಚೆನ್ನಾಗಿದೆ ಎಂದು ಹೆಮ್ಮೆ ಎನಿಸುತ್ತದೆ. ಆದರೆ ಇತ್ತೀಚಿಗೆ  ರಾಜ್ಯ ಸರ್ಕಾರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘಟನೆಗಳ ಜೊತೆಗಾಗಲೀ ಮತ್ತು ಶಿಕ್ಷಣ ತಜ್ಞರ ಜೊತೆಗಾಗಲಿ ಚರ್ಚಿಸದೆ ಏಕಾಏಕಿ‌ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುತ್ತಿರುವ ಬದಲಾವಣೆಗಳನ್ನು ಕೂಡಲೇ ನಿಲ್ಲಿಸಬೇಕು.  ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದೇ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಡಿ.1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ ಎಂದರು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್  ಅವರಿಗೆ  ಮನವಿ ನೀಡುವ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ. ಕಾರ್ಯಾಧ್ಯಕ್ಷ ಪ್ರಮೋದ್. ಡಿ.ಕುಲಕರ್ಣಿ, ಕಾರ್ಯದರ್ಶಿ  ಬಿ.ಆರ್.ವೇಣುಗೋಪಾಲ್, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಟಿ.ಆರ್.ಶ್ರೀರಾಮೇಗೌಡ,  ಪಿ.ಗೋವಿಂದರಾಜು, ಕೇಶವಮೂರ್ತಿ, ಬೋಧಕೇತರ ಸಂಘದ ಪದಾಧಿಕಾರಿಗಳಾದ ರಮೇಶ್, ನಂದಕುಮಾರ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

58 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago