ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನ ಸರ್ಕಾರ ಕೈಬಿಡಬೇಕು- ಬೆ.ಗ್ರಾ ಪ.ಪೂ ಕಾ. ಪ್ರಾಂ. ಸಂಘದ ಅಧ್ಯಕ್ಷ ಜಿ.ದಯಾನಂದ್

ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುತ್ತಿದೆ. ಪ್ರಸ್ತುತ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎಂದು ಬದಲಾಯಿಸಿದೆ. ಪ್ರೌಢಶಾಲಾ  ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್   ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ‌ಮಾತನಾಡಿದರು.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಲೀನವನ್ನು ಹಿಂಪಡೆದು ಪಿಯುಸಿ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಬೇಕಾಗಿದೆ. ಜಿಲ್ಲಾ ಹಂತಗಳಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾಪಂಚಾಯಿತಿಗೆ ವಹಿಸಿರುವ  ಸರ್ಕಾರದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು.   ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕೇತರನ್ನು  ನೇಮಕಾತಿ ಮಾಡಿಕೊಳ್ಳಬೇಕು ಎಂದರು.

ಪದವಿ ಪೂರ್ವ ಶಿಕ್ಷಣವು ಶಾಲಾಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಸೇತುವೆಯಾಗಿದೆ. ಹೊರ ರಾಜ್ಯಗಳ ಶಿಕ್ಷಣ ತಜ್ಞರು ಆಗಮಿಸಿ ನಮ್ಮ ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ಮಾಡುವುದನ್ನು ಗಮನಿಸಿದರೆ ನಮ್ಮ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆ ಎಷ್ಟು ಚೆನ್ನಾಗಿದೆ ಎಂದು ಹೆಮ್ಮೆ ಎನಿಸುತ್ತದೆ. ಆದರೆ ಇತ್ತೀಚಿಗೆ  ರಾಜ್ಯ ಸರ್ಕಾರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘಟನೆಗಳ ಜೊತೆಗಾಗಲೀ ಮತ್ತು ಶಿಕ್ಷಣ ತಜ್ಞರ ಜೊತೆಗಾಗಲಿ ಚರ್ಚಿಸದೆ ಏಕಾಏಕಿ‌ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುತ್ತಿರುವ ಬದಲಾವಣೆಗಳನ್ನು ಕೂಡಲೇ ನಿಲ್ಲಿಸಬೇಕು.  ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದೇ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಡಿ.1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ ಎಂದರು.

ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್  ಅವರಿಗೆ  ಮನವಿ ನೀಡುವ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ. ಕಾರ್ಯಾಧ್ಯಕ್ಷ ಪ್ರಮೋದ್. ಡಿ.ಕುಲಕರ್ಣಿ, ಕಾರ್ಯದರ್ಶಿ  ಬಿ.ಆರ್.ವೇಣುಗೋಪಾಲ್, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಟಿ.ಆರ್.ಶ್ರೀರಾಮೇಗೌಡ,  ಪಿ.ಗೋವಿಂದರಾಜು, ಕೇಶವಮೂರ್ತಿ, ಬೋಧಕೇತರ ಸಂಘದ ಪದಾಧಿಕಾರಿಗಳಾದ ರಮೇಶ್, ನಂದಕುಮಾರ್ ಮೊದಲಾದವರು ಹಾಜರಿದ್ದರು.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

1 hour ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

22 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

24 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago