ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಬದಲಾಯಿಸುತ್ತಿದೆ. ಪ್ರಸ್ತುತ ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎಂದು ಬದಲಾಯಿಸಿದೆ. ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನು ಸರ್ಕಾರ ಕೈಬಿಡಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಿ.ದಯಾನಂದ್ ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಘನತೆಯನ್ನು ಯಥಾಸ್ಥಿತಿ ಉಳಿಸಬೇಕೆಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮೂಲಕ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ, ಪ್ರಾಂಶುಪಾಲರ ಸಂಘ ಮತ್ತು ಬೋಧಕೇತರ ನೌಕರರ ಸಂಘಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿಲೀನವನ್ನು ಹಿಂಪಡೆದು ಪಿಯುಸಿ ಪರೀಕ್ಷೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಬೇಕಾಗಿದೆ. ಜಿಲ್ಲಾ ಹಂತಗಳಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿಯನ್ನು ಜಿಲ್ಲಾಪಂಚಾಯಿತಿಗೆ ವಹಿಸಿರುವ ಸರ್ಕಾರದ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬೋಧಕೇತರನ್ನು ನೇಮಕಾತಿ ಮಾಡಿಕೊಳ್ಳಬೇಕು ಎಂದರು.
ಪದವಿ ಪೂರ್ವ ಶಿಕ್ಷಣವು ಶಾಲಾಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಸೇತುವೆಯಾಗಿದೆ. ಹೊರ ರಾಜ್ಯಗಳ ಶಿಕ್ಷಣ ತಜ್ಞರು ಆಗಮಿಸಿ ನಮ್ಮ ರಾಜ್ಯದ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆಯನ್ನು ಅಧ್ಯಯನ ಮಾಡುವುದನ್ನು ಗಮನಿಸಿದರೆ ನಮ್ಮ ಪದವಿ ಪೂರ್ವ ಶಿಕ್ಷಣ ವ್ಯವಸ್ಥೆ ಎಷ್ಟು ಚೆನ್ನಾಗಿದೆ ಎಂದು ಹೆಮ್ಮೆ ಎನಿಸುತ್ತದೆ. ಆದರೆ ಇತ್ತೀಚಿಗೆ ರಾಜ್ಯ ಸರ್ಕಾರ ಉಪನ್ಯಾಸಕರ ಮತ್ತು ಪ್ರಾಂಶುಪಾಲರ ಸಂಘಟನೆಗಳ ಜೊತೆಗಾಗಲೀ ಮತ್ತು ಶಿಕ್ಷಣ ತಜ್ಞರ ಜೊತೆಗಾಗಲಿ ಚರ್ಚಿಸದೆ ಏಕಾಏಕಿ ಪಿಯುಸಿ ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆ ನಡೆಸಲು ನಿರ್ಧರಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡೆಸುತ್ತಿರುವ ಬದಲಾವಣೆಗಳನ್ನು ಕೂಡಲೇ ನಿಲ್ಲಿಸಬೇಕು. ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸದೇ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ, ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಡಿ.1 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿವೆ ಎಂದರು.
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರಿಗೆ ಮನವಿ ನೀಡುವ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ. ಕಾರ್ಯಾಧ್ಯಕ್ಷ ಪ್ರಮೋದ್. ಡಿ.ಕುಲಕರ್ಣಿ, ಕಾರ್ಯದರ್ಶಿ ಬಿ.ಆರ್.ವೇಣುಗೋಪಾಲ್, ಉಪನ್ಯಾಸಕರ ಸಂಘದ ಪದಾಧಿಕಾರಿಗಳಾದ ಟಿ.ಆರ್.ಶ್ರೀರಾಮೇಗೌಡ, ಪಿ.ಗೋವಿಂದರಾಜು, ಕೇಶವಮೂರ್ತಿ, ಬೋಧಕೇತರ ಸಂಘದ ಪದಾಧಿಕಾರಿಗಳಾದ ರಮೇಶ್, ನಂದಕುಮಾರ್ ಮೊದಲಾದವರು ಹಾಜರಿದ್ದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…