Categories: ಲೇಖನ

ಪ್ರೌಢಶಾಲೆಗಳಲ್ಲಿ ಲೈಂಗಿಕ ಶಿಕ್ಷಣ ಅವಶ್ಯಕತೆ ಇದೆಯೇ..? ಅದು ಅನಿವಾರ್ಯವೇ…?

ಕರ್ನಾಟಕದಲ್ಲಿ ಎಂಟರಿಂದ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಅವಶ್ಯಕತೆ ಇದೆಯೇ ? ಅದು ಅನಿವಾರ್ಯವೇ ? ಅಥವಾ ಅದನ್ನು ನಿರ್ಲಕ್ಷಿಸಬಹುದೇ ? ಸಂಪ್ರದಾಯವಾದಿಗಳಿಗೆ ಬೇಸರವಾಗಬಹುದೇ ?…..

ಇತ್ತೀಚೆಗೆ ಮಾನವೀಯ ಮೌಲ್ಯಗಳ ನೈತಿಕ ಶಿಕ್ಷಣ ಮತ್ತು ಲೈಂಗಿಕ ಶಿಕ್ಷಣ ಪಠ್ಯದಲ್ಲಿ ಕಡ್ಡಾಯಗೊಳಿಸುವ ಬಗ್ಗೆ ಚರ್ಚೆ, ಸಂವಾದಗಳು, ಪ್ರಕ್ರಿಯೆಗಳು ಪ್ರಾರಂಭವಾಗಿದೆ. ಮಾನವೀಯ ಮೌಲ್ಯಗಳ ಕಡ್ಡಾಯಗೊಳಿಸುವ ಬಗ್ಗೆ ಯಾರಿಗೂ ತಕರಾರಿಲ್ಲ. ಆದರೆ ಕೆಲವು ಸಂಪ್ರದಾಯವಾದಿಗಳಿಗೆ ಲೈಂಗಿಕ ಶಿಕ್ಷಣದ ಬಗ್ಗೆ ಒಂದಷ್ಟು ಅಸಮಾಧಾನವಿದೆ….

ಭಾರತ ದೇಶದಲ್ಲಿ ಮೂಲಭೂತವಾಗಿ ಭಕ್ತಿ, ನಂಬಿಕೆ, ಮೌಢ್ಯ, ಭಯ, ಮಡಿವಂತಿಕೆಯ ಆಧಾರದ ಮೇಲೆಯೇ ಇಲ್ಲಿನ ಕೌಟುಂಬಿಕ ವ್ಯವಸ್ಥೆ ಮತ್ತು ಸಮಾಜ ರೂಪಗೊಂಡಿದೆ. ಜನರ ಮಾನಸಿಕ ಸ್ಥಿತಿಯೂ ಬಹುತೇಕ ಅದಕ್ಕೆ ಅನುಗುಣವಾಗಿಯೇ ಕೆಲಸ ಮಾಡುತ್ತದೆ…

ಆದರೆ 90 ರ ದಶಕದ ನಂತರ ಮುಕ್ತ ಮಾರುಕಟ್ಟೆಗೆ ಭಾರತ ಸಹಿ ಹಾಕಿದ ಮೇಲೆ ಇಡೀ ಜಗತ್ತು ಮತ್ತು ಅಲ್ಲಿನ ಎಲ್ಲಾ ವಸ್ತುಗಳು ವಿಚಾರಗಳು ಭಾರತವನ್ನು ಪ್ರವೇಶಿಸಿಯಾಗಿದೆ. ಅದಕ್ಕೆ ಪೂರಕವಾಗಿ ಸಮೂಹ ಸಂಪರ್ಕ ಕ್ರಾಂತಿಯು ಇಡೀ ಜಗತ್ತನ್ನೇ ಕಿರಿದಾಗಿಸಿದೆ. ಯಾವುದೇ ಇತಿಮಿತಿ ಇಲ್ಲದೆ ಎಲ್ಲಾ ಮಾಹಿತಿಯು ಎಲ್ಲರಿಗೂ ಲಿಂಗ ಭೇದವಿಲ್ಲದೆ, ವಯೋಮಾನದ ಭೇದವಿಲ್ಲದೆ ಸಿಗುತ್ತಿದೆ. ಇಂತಹ ಸಂದರ್ಭದಲ್ಲಿ ಲೈಂಗಿಕ ಶಿಕ್ಷಣದ ಬಗ್ಗೆ ಚರ್ಚೆ ಆರಂಭವಾಗಿದೆ…

ಪಾಶ್ಚಾತ್ಯ ಜಗತ್ತು ಲೈಂಗಿಕ ಶಿಕ್ಷಣವನ್ನು ಅಥವಾ ಲೈಂಗಿಕತೆಯನ್ನು ನೋಡುವ ರೀತಿ ನಮಗಿಂತ ಭಿನ್ನವಾಗಿದೆ. ಭಾರತದಲ್ಲಿ ಲೈಂಗಿಕತೆಯ ಬಗ್ಗೆ ಸಾಕಷ್ಟು ಮಡಿವಂತಿಕೆ ಇದೆ. ಅದು ಇತಿಹಾಸದಲ್ಲಿ ವಾತ್ಸಾಯನನ ” ಕಾಮಸೂತ್ರ ” ಲೈಂಗಿಕತೆಯ ವಿವಿಧ ಆಯಾಮಗಳನ್ನು, ಅದರ ಆರೋಗ್ಯಕರ ಮತ್ತು ತೃಪ್ತಿಕರ ವಿಧಾನವನ್ನು ವಿವರಿಸಿದೆ….

ಕೆಲವು ಚಿತ್ರಕಲೆ ಮತ್ತು ಶಿಲ್ಪಕಲೆಗಳಲ್ಲಿ ಲೈಂಗಿಕ ಕ್ರಿಯೆಯ ದೃಶ್ಯಗಳನ್ನು ಬಿಡಿಸಲಾಗಿದೆ. ಮುಖ್ಯವಾಗಿ ಕರ್ನಾಟಕದ ಮೇಲುಕೋಟೆಯ
ಶಿಲ್ಪಕಲೆಯಲ್ಲಿ ಬಹುತೇಕ ನೀಲಿ ಚಿತ್ರದಷ್ಟೇ ಲೈಂಗಿಕ ದೃಶ್ಯಗಳನ್ನು ಬಹಿರಂಗವಾಗಿಯೇ ಕೆತ್ತಲಾಗಿದೆ…

ಇದೀಗ ಸಾಮಾಜಿಕ ಜಾಲತಾಣಗಳು, ಮಾಧ್ಯಮಗಳು, ಸಿನಿಮಾ ಧಾರವಾಹಿಗಳಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಲೈಂಗಿಕತೆಯ ದೃಶ್ಯಗಳು ಸರ್ವೆ ಸಾಮಾನ್ಯವಾಗಿದೆ. ಇಂತಹ ಸಂದರ್ಭದಲ್ಲಿ ಲೈಂಗಿಕ ಶಿಕ್ಷಣದ ಅನಿವಾರ್ಯತೆ ಖಂಡಿತ ಇದೆ. ಏಕೆಂದರೆ ಈ ಎಲ್ಲಾ ಮಾಧ್ಯಮಗಳು ಪ್ರೌಢಾವಸ್ಥೆಯ ಯುವಕ ಯುವತಿಯರನ್ನು ಗ್ರಾಹಕರೆಂದು ಪರಿಗಣಿಸಿ ಅವರ ಹಾದಿ ತಪ್ಪಿಸುವ ಸಾಧ್ಯತೆ ಹೆಚ್ಚು. ಸಾರ್ವಜನಿಕ ಶೌಚಾಲಯದಲ್ಲಿ ಅಂಟಿಸಿರುವ ಜಾಹೀರಾತಗಳೇ ಇದಕ್ಕೆ ಸಾಕ್ಷಿ….

ಈಗಾಗಲೇ ಅನೇಕ ಘಟನೆಗಳಲ್ಲಿ ಪ್ರೌಢಾವಸ್ಥೆಯ ಯುವಕ ಯುವತಿಯರು ಅಪಾರ ಮಾನಸಿಕ ಒತ್ತಡಕ್ಕೆ ಸಿಲುಕಿ ದಾರಿ ತಪ್ಪಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳು ಇದೆ. ಶಾಲೆಯ ಶಿಕ್ಷಣದಲ್ಲಿ ಅದನ್ನು ಕಡ್ಡಾಯಗೊಳಿಸಿದರೆ ಕನಿಷ್ಠ ಆ ಬಗ್ಗೆ ಶಿಕ್ಷಕರೊಂದಿಗೆ ಮುಕ್ತವಾಗಿ ಮತ್ತು ಅಧಿಕೃತವಾಗಿ ಚರ್ಚಿಸುವ ಸಾಧ್ಯತೆ ಇದೆ. ಆಗ ಮಡಿವಂತಿಕೆ ಕಡಿಮೆಯಾಗಿ ಈಗಿನ ಈ ಆಧುನಿಕ ಯುವಕ ಯುವತಿಯರಲ್ಲಿ ಒಂದಷ್ಟು ಒಳ್ಳೆಯ ಪರಿಣಾಮ ಬೀರಬಹುದು…

ಮೂವತ್ತು ವರ್ಷಗಳಲ್ಲಿ ಹಿಂದೆ ಇದ್ದ ಹೆಣ್ಣು ಗಂಡಿನ ನಡುವಿನ ಅಂತರ ಈಗ ಗಣನೀಯವಾಗಿ ಕಡಿಮೆಯಾಗಿದೆ. ಈಗ ಇದು ಶಿಕ್ಷಣದಲ್ಲಿ ಪ್ರಸ್ತಾಪವಾದರೆ ಅವರ ಕೀಳರಿಮೆ ಕಡಿಮೆಯಾಗಿ ಆತ್ಮವಿಶ್ವಾಸ ಹೆಚ್ಚಾಗಬಹುದು. ಅಂದಿನ ಅವಿಭಕ್ತ ಕುಟುಂಬಗಳು ಮಾಯವಾಗಿ ಚಿಕ್ಕ ಕುಟುಂಬಗಳು ಅಸ್ತಿತ್ವದಲ್ಲಿರುವಾಗ ಯುವಕ ಯುವತಿಯರಿಗೆ ಲೈಂಗಿಕ ತಿಳುವಳಿಕೆ ಸರಿಯಾಗಿ ಸಿಗುತ್ತಿಲ್ಲ…

ಲೈಂಗಿಕತೆ ಎಂದರೆ ಹೆಣ್ಣನ್ನು ಭೋಗದ ವಸ್ತುವೆಂದು ತಿಳಿದು ವರ್ತಿಸುವ ರೀತಿಯಲ್ಲ. ಲೈಂಗಿಕ ಶಿಕ್ಷಣವೆಂದರೆ ಮಿಲನ ಮಹೋತ್ಸವದ ವಿವರಣೆಯಲ್ಲ. ಲೈಂಗಿಕ ಶಿಕ್ಷಣದಲ್ಲಿ ಪ್ರೌಢಾವಸ್ಥೆಯಲ್ಲಿ ಹೆಣ್ಣು ಮತ್ತು ಗಂಡಿನ ದೇಹ ಮತ್ತು ಮನಸ್ಸಿನಲಾಗುವ ಬದಲಾವಣೆಗಳು, ಒತ್ತಡ, ಆತಂಕ, ಅದರಿಂದಾಗಿ ಅವರ ವರ್ತನೆಗಳಲ್ಲಿ ಆಗುವ ಬದಲಾವಣೆ, ಗುಪ್ತಾಂಗಗಳ ನಿರ್ವಹಣೆಯಲ್ಲಿ ಕಾಪಾಡಬೇಕಾಗಿರುವ ಸ್ವಚ್ಛತೆ, ಮನೋ ನಿಯಂತ್ರಣ ಒಳಗೊಂಡಿರುತ್ತದೆ…

ಇಲ್ಲಿ ಒಂದು ಅಪಾಯವೆಂದರೆ ಈ ಶಿಕ್ಷಣ ನೀಡುವಾಗ ಆ ಶಿಕ್ಷಣದ ಪಠ್ಯಕ್ರಮ, ಬೋಧನಾ ಕ್ರಮ, ಬೋಧಿಸುವ ವ್ಯಕ್ತಿಯ ವ್ಯಕ್ತಿತ್ವ ಎಲ್ಲವೂ ಮುಖ್ಯವಾಗುತ್ತದೆ. ಅದನ್ನು ಅತ್ಯುತ್ಕೃಷ್ಟ ಮಟ್ಟದಲ್ಲಿರುವಂತೆ ಮೇಲ್ವಿಚಾರಣೆ ಮಾಡಬೇಕು. ಯಾರೋ ವಿಕೃತ ಕಾಮಿಯೋ ಅಥವಾ ಇನ್ಯಾರೋ ಮೂಲಭೂತವಾದಿಯ ಕೈಯಲ್ಲಿ ಪಠ್ಯ ಬೋಧಿಸಿದರೆ ಒಂದಷ್ಟು ತೊಂದರೆ ಮತ್ತು ಅಪಹಾಸ್ಯವಾಗಬಹುದು…

ಆದ್ದರಿಂದ ಲೈಂಗಿಕ ಶಿಕ್ಷಣವನ್ನು ಕ್ರಮಬದ್ಧವಾಗಿ, ಅತ್ಯಂತ ಆತ್ಮೀಯವಾಗಿ, ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಳವಡಿಸಿಕೊಂಡರೆ ಖಂಡಿತ ಉತ್ತಮ ಪರಿಣಾಮ ಬೀರುತ್ತದೆ. ಇದೇನು ಪಾಶ್ಚಾತ್ಯೀಕರಣವಲ್ಲ. ಇದು ಅತ್ಯಂತ ಸಹಜವಾದ ಶಿಕ್ಷಣ ಕ್ರಮದ ಒಂದು ಭಾಗ ಮಾತ್ರ. ಗೌಪ್ಯತೆ ಇಂದ ಮುಕ್ತತೆಗೆ ಸಹಜವಾಗಿ ಮತ್ತು ಪ್ರಬುದ್ಧವಾಗಿ ಪರಿವರ್ತನಗೊಳ್ಳುವ ಪ್ರಕ್ರಿಯೆ…

ನೈತಿಕ ಮೌಲ್ಯಗಳ ಶಿಕ್ಷಣ ಮತ್ತು ಲೈಂಗಿಕ ಶಿಕ್ಷಣ ಇಂದಿನ ಆಧುನಿಕ ಯುಗದಲ್ಲಿ ಉತ್ತಮ ಗುಣಮಟ್ಟದಲ್ಲಿ ಕಡ್ಡಾಯಗೊಳಿಸಿದರೆ ಉತ್ತಮ. ಉಳಿದದ್ದು ನಿಮ್ಮ ವಿವೇಚನೆಗೆ ಬಿಡುತ್ತಾ……..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

49 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago