ಪ್ಲಾಸ್ಟಿಕ್ ಡ್ರಮ್ ಇದ್ದ ಗೋಡನ್ ಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಭಸ್ಮ; ಪಾಲನಜೋಗಿಹಳ್ಳಿ ಬಳಿ ಘಟನೆ

ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿಯ ಪ್ಲಾಸ್ಟಿಕ್ ಗೋಡೋನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.

ರೋಜಿಪುರ ನಿವಾಸಿ ನವೀನ್ ಎನ್ನುವವರಿಗೆ ಸೇರಿದ ಪ್ಲಾಸ್ಟಿಕ್ ಗೋಡನ್ ಇದಾಗಿದ್ದು, ಗೋಡನ್ ಹಿಂಭಾಗದಲ್ಲಿನ ಜಮೀನಿನಲ್ಲಿದ್ದ ಹುಲ್ಲಿಗೆ ತಗುಲಿದ್ದ ಬೆಂಕಿ, ಗೋಡನ್ ಗೆ ವ್ಯಾಪಿಸಿ ಸುಮಾರು 20 ರಿಂದ 25 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿ ಬೆಂಕಿ ನಂದಿಸಿದ್ದಾರೆ.

ಸ್ಥಳೀಯರು ಗೋಡನ್ ಒಳಗಿಂದ ಹೊಗೆ ಬರುತ್ತಿರುವುದು ಕಂಡು ಮಾಲೀಕರಿಗೆ ಸುದ್ದಿ ಮುಟ್ಟಿಸಿದ್ದು, ಮಾಲೀಕ ನವೀನ್ ಸ್ಥಳಕ್ಕೆ ಬರುವ ವೇಳೆಗೆ ಬೆಂಕಿಯ ತೀವ್ರವಾಗಿ ವ್ಯಾಪಿಸಿದೆ.

ಘಟನೆಯಲ್ಲಿ ಎರಡು ಸಾವಿರ ಪ್ಲಾಸ್ಟಿಕ್ ಡ್ರಮ್, 1500 ಪ್ಲಾಸ್ಟಿಕ್ ಕ್ರೇಟ್, ಅಕ್ರಾಲಿಕ್ ಶೀಟ್ ಸುಟ್ಟು ಭಸ್ಮ ಆಗಿರುವುದರಿಂದ ಅಂದಾಜು 20-25 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ನಷ್ಟವಾಗಿದೆ ಎನ್ನಲಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಆರು ತಿಂಗಳಷ್ಟೆ ತನ್ನ ಸ್ನೇಹಿತ ಬಳಿ ಅಂಗಡಿಯನ್ನು ಖರೀದಿಸಿ ವ್ಯಾಪಾರ ನಡೆಸುತ್ತಿದ್ದ ನವೀನ್, ನಾಳೆ ಗೋದಾಮಿನಲ್ಲಿದ್ದ ಸ್ಟಾಕ್ ಲೋಡ್‌ ಮಾಡಿ ಮಾರ್ಕೆಟ್ ಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿತ್ತು. ಅಷ್ಟರಲ್ಲಿ ಈ‌ ಘಟನೆ ಸಂಭವಿಸಿದೆ. ಇದರಿಂದ ತೀವ್ರ ನಷ್ಟಕ್ಕೆ ಒಳಗಾಗಿರುವ ಗೋದಾಮಿನ‌ ಮಾಲೀಕ

Ramesh Babu

Journalist

Recent Posts

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

46 minutes ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

7 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

8 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

21 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

22 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

1 day ago