ಪ್ಲಾಸ್ಟಿಕ್ ಡ್ರಮ್ ಇದ್ದ ಗೋಡನ್ ಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ ಮೌಲ್ಯದ ವಸ್ತುಗಳು ಭಸ್ಮ; ಪಾಲನಜೋಗಿಹಳ್ಳಿ ಬಳಿ ಘಟನೆ

ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿಯ ಪ್ಲಾಸ್ಟಿಕ್ ಗೋಡೋನಿಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ.

ರೋಜಿಪುರ ನಿವಾಸಿ ನವೀನ್ ಎನ್ನುವವರಿಗೆ ಸೇರಿದ ಪ್ಲಾಸ್ಟಿಕ್ ಗೋಡನ್ ಇದಾಗಿದ್ದು, ಗೋಡನ್ ಹಿಂಭಾಗದಲ್ಲಿನ ಜಮೀನಿನಲ್ಲಿದ್ದ ಹುಲ್ಲಿಗೆ ತಗುಲಿದ್ದ ಬೆಂಕಿ, ಗೋಡನ್ ಗೆ ವ್ಯಾಪಿಸಿ ಸುಮಾರು 20 ರಿಂದ 25 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸಲು ಶ್ರಮಿಸಿ ಬೆಂಕಿ ನಂದಿಸಿದ್ದಾರೆ.

ಸ್ಥಳೀಯರು ಗೋಡನ್ ಒಳಗಿಂದ ಹೊಗೆ ಬರುತ್ತಿರುವುದು ಕಂಡು ಮಾಲೀಕರಿಗೆ ಸುದ್ದಿ ಮುಟ್ಟಿಸಿದ್ದು, ಮಾಲೀಕ ನವೀನ್ ಸ್ಥಳಕ್ಕೆ ಬರುವ ವೇಳೆಗೆ ಬೆಂಕಿಯ ತೀವ್ರವಾಗಿ ವ್ಯಾಪಿಸಿದೆ.

ಘಟನೆಯಲ್ಲಿ ಎರಡು ಸಾವಿರ ಪ್ಲಾಸ್ಟಿಕ್ ಡ್ರಮ್, 1500 ಪ್ಲಾಸ್ಟಿಕ್ ಕ್ರೇಟ್, ಅಕ್ರಾಲಿಕ್ ಶೀಟ್ ಸುಟ್ಟು ಭಸ್ಮ ಆಗಿರುವುದರಿಂದ ಅಂದಾಜು 20-25 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ವಸ್ತುಗಳು ನಷ್ಟವಾಗಿದೆ ಎನ್ನಲಾಗುತ್ತಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಆರು ತಿಂಗಳಷ್ಟೆ ತನ್ನ ಸ್ನೇಹಿತ ಬಳಿ ಅಂಗಡಿಯನ್ನು ಖರೀದಿಸಿ ವ್ಯಾಪಾರ ನಡೆಸುತ್ತಿದ್ದ ನವೀನ್, ನಾಳೆ ಗೋದಾಮಿನಲ್ಲಿದ್ದ ಸ್ಟಾಕ್ ಲೋಡ್‌ ಮಾಡಿ ಮಾರ್ಕೆಟ್ ಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗಿತ್ತು. ಅಷ್ಟರಲ್ಲಿ ಈ‌ ಘಟನೆ ಸಂಭವಿಸಿದೆ. ಇದರಿಂದ ತೀವ್ರ ನಷ್ಟಕ್ಕೆ ಒಳಗಾಗಿರುವ ಗೋದಾಮಿನ‌ ಮಾಲೀಕ

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

4 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

8 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

17 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

23 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago