ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್‌ ಯಿಪ್ಪೀ ವೇ ಫಾರ್‌ ಲೈಪ್‌ ಸಹಯೋಗದೊಂದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಜೊತೆಗೆ, ಪ್ಲಾಸ್ಟಿಕ್‌ ನಿಂದ ತಯಾರಿಸಿದ ಬೆಂಚು ಮತ್ತು ಮೇಜುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.

ವೈಟ್‌ಫೀಲ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮೇಳದಲ್ಲಿ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವುದು ಹಾಗೂ ಅದರ ಮರುಬಳಕೆ ಮಾಡುವ ಬಗ್ಗೆ ವಿಜ್ಞಾನ ಮೇಳದಲ್ಲಿ ಪ್ರದರ್ಶನ ನೀಡಲಾಯಿತು.

ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇ ವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್‌ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇವೇಳೆ ವಿತರಿಸಲಾಯಿತು.
ಐಟಿಸಿ ಫುಡ್ಸ್‌ನ ಸ್ನ್ಯಾಕ್ಸ್‌, ನೂಡಲ್ಸ್‌ ಮತ್ತು ಪಾಸ್ತಾದ ಸಿಒಒ ಕವಿತಾ ಚತುರ್ವೇದಿ ಮಾತನಾಡಿ, ಐಟಿಸಿಯ ಸುಸ್ಥಿರತೆ ಬದ್ಧತೆಗೆ ಅನುಗುಣವಾಗಿ ಯುವ ಮನಸ್ಸುಗಳಲ್ಲಿ ಪರಿಸರ ಜವಾಬ್ದಾರಿಯನ್ನು ತುಂಬಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛ ಭವಿಷ್ಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

2022 ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಇದುವರೆಗೂ ಭಾರತದ 4,000 ಶಾಲೆಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅವರಿಗೆ ಶಿಕ್ಷಣ ನೀಡಿದೆ. ಅಷ್ಟೆ ಅಲ್ಲದೆ, 58,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಮರುಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ 4000 ಕ್ಕೂ ಹೆಚ್ಚು ಮೇಜುಗಳು ಮತ್ತು ಬೆಂಚುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನ್ಯೂಟ್ರಿಷನ್ ಸೈನ್ಸಸ್ ITC LTD ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ, ಐಸಿಎಂಎಲ್ ಮಾಲೂರ್ ITC ಲಿಮಿಟೆಡ್ ಮುಖ್ಯಸ್ಥರು ಮುತ್ತು ಕೃಷ್ಣ ಮೂರ್ತಿ, ಇಎಚ್ಎಸ್ & ಸಸ್ಟೈನಬಿಲಿಟಿ ITC LTD ಜಿಎಂ ಅನಂತ್ ಮಹೇಶ್ವರಿ ಹಾಗೂ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಮುಖ್ಯಶಿಕ್ಷಕಿ ಎಚ್‌. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

54 minutes ago

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

3 hours ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

11 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

11 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

23 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 day ago