ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್‌ ಯಿಪ್ಪೀ ವೇ ಫಾರ್‌ ಲೈಪ್‌ ಸಹಯೋಗದೊಂದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಜೊತೆಗೆ, ಪ್ಲಾಸ್ಟಿಕ್‌ ನಿಂದ ತಯಾರಿಸಿದ ಬೆಂಚು ಮತ್ತು ಮೇಜುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.

ವೈಟ್‌ಫೀಲ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮೇಳದಲ್ಲಿ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವುದು ಹಾಗೂ ಅದರ ಮರುಬಳಕೆ ಮಾಡುವ ಬಗ್ಗೆ ವಿಜ್ಞಾನ ಮೇಳದಲ್ಲಿ ಪ್ರದರ್ಶನ ನೀಡಲಾಯಿತು.

ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇ ವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್‌ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇವೇಳೆ ವಿತರಿಸಲಾಯಿತು.
ಐಟಿಸಿ ಫುಡ್ಸ್‌ನ ಸ್ನ್ಯಾಕ್ಸ್‌, ನೂಡಲ್ಸ್‌ ಮತ್ತು ಪಾಸ್ತಾದ ಸಿಒಒ ಕವಿತಾ ಚತುರ್ವೇದಿ ಮಾತನಾಡಿ, ಐಟಿಸಿಯ ಸುಸ್ಥಿರತೆ ಬದ್ಧತೆಗೆ ಅನುಗುಣವಾಗಿ ಯುವ ಮನಸ್ಸುಗಳಲ್ಲಿ ಪರಿಸರ ಜವಾಬ್ದಾರಿಯನ್ನು ತುಂಬಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛ ಭವಿಷ್ಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

2022 ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಇದುವರೆಗೂ ಭಾರತದ 4,000 ಶಾಲೆಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅವರಿಗೆ ಶಿಕ್ಷಣ ನೀಡಿದೆ. ಅಷ್ಟೆ ಅಲ್ಲದೆ, 58,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಮರುಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ 4000 ಕ್ಕೂ ಹೆಚ್ಚು ಮೇಜುಗಳು ಮತ್ತು ಬೆಂಚುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನ್ಯೂಟ್ರಿಷನ್ ಸೈನ್ಸಸ್ ITC LTD ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ, ಐಸಿಎಂಎಲ್ ಮಾಲೂರ್ ITC ಲಿಮಿಟೆಡ್ ಮುಖ್ಯಸ್ಥರು ಮುತ್ತು ಕೃಷ್ಣ ಮೂರ್ತಿ, ಇಎಚ್ಎಸ್ & ಸಸ್ಟೈನಬಿಲಿಟಿ ITC LTD ಜಿಎಂ ಅನಂತ್ ಮಹೇಶ್ವರಿ ಹಾಗೂ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಮುಖ್ಯಶಿಕ್ಷಕಿ ಎಚ್‌. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago