ಪ್ಲಾಸ್ಟಿಕ್‌ ಮರುಬಳಕೆ ಕುರಿತು ಶಾಲಾ ಮಕ್ಕಳಿಗೆ ಜಾಗೃತಿ

ಬೆಂಗಳೂರು: ಸ್ವಚ್ಛ ಹಸಿರು ಮತ್ತು ಆರೋಗ್ಯಕರ ನಾಳೆಗೆ ಕೊಡುಗೆ ನೀಡುವ ಗುರಿಯೊಂದಿಗೆ ಐಟಿಸಿ ಸನ್‌ಫೀಸ್ಟ್‌ ಯಿಪ್ಪೀ ವೇ ಫಾರ್‌ ಲೈಪ್‌ ಸಹಯೋಗದೊಂದಿಗೆ ಪ್ಲಾಸ್ಟಿಕ್‌ ತ್ಯಾಜ್ಯ ನಿರ್ವಹಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿತು. ಜೊತೆಗೆ, ಪ್ಲಾಸ್ಟಿಕ್‌ ನಿಂದ ತಯಾರಿಸಿದ ಬೆಂಚು ಮತ್ತು ಮೇಜುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಿಸಲಾಯಿತು.

ವೈಟ್‌ಫೀಲ್ಡ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಮೇಳದಲ್ಲಿ ಪ್ಲಾಸ್ಟಿಕ್‌ ಕುರಿತು ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್‌ ಬಳಕೆ ಕಡಿಮೆ ಮಾಡುವುದು ಹಾಗೂ ಅದರ ಮರುಬಳಕೆ ಮಾಡುವ ಬಗ್ಗೆ ವಿಜ್ಞಾನ ಮೇಳದಲ್ಲಿ ಪ್ರದರ್ಶನ ನೀಡಲಾಯಿತು.

ಸುಸ್ಥಿರತೆ ವಿಷಯಗಳ ಕುರಿತು ಕಲಾತ್ಮಕ ಅಭಿವ್ಯಕ್ತಿಯನ್ನು ಉತ್ತೇಜಿಸಲು ಚಿತ್ರಕಲಾ ಸ್ಪರ್ಧೆಯನ್ನು ಸಹ ಇದೇ ವೇಳೆ ಆಯೋಜಿಸಲಾಗಿತ್ತು. ಪರಿಸರ ಪ್ರಜ್ಞೆಯ ಉತ್ಪನ್ನಗಳನ್ನು ಉತ್ತೇಜಿಸುವ ಮೂಲಕ ವಿದ್ಯಾರ್ಥಿಗಳು ನಡೆಸುವ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು. ಇದಲ್ಲದೆ ಮರುಬಳಕೆ ಪ್ಲಾಸ್ಟಿಕ್‌ ತ್ಯಾಜ್ಯದಿಂದ ತಯಾರಿಸಿದ 100 ಬೆಂಚುಗಳು ಮತ್ತು ಮೇಜುಗಳನ್ನು ಸಹ ಇದೇವೇಳೆ ವಿತರಿಸಲಾಯಿತು.
ಐಟಿಸಿ ಫುಡ್ಸ್‌ನ ಸ್ನ್ಯಾಕ್ಸ್‌, ನೂಡಲ್ಸ್‌ ಮತ್ತು ಪಾಸ್ತಾದ ಸಿಒಒ ಕವಿತಾ ಚತುರ್ವೇದಿ ಮಾತನಾಡಿ, ಐಟಿಸಿಯ ಸುಸ್ಥಿರತೆ ಬದ್ಧತೆಗೆ ಅನುಗುಣವಾಗಿ ಯುವ ಮನಸ್ಸುಗಳಲ್ಲಿ ಪರಿಸರ ಜವಾಬ್ದಾರಿಯನ್ನು ತುಂಬಲು ಈ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛ ಭವಿಷ್ಯಕ್ಕಾಗಿ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

2022 ರಲ್ಲಿ ಪ್ರಾರಂಭವಾದ ಈ ಕಾರ್ಯಕ್ರಮವು ಇದುವರೆಗೂ ಭಾರತದ 4,000 ಶಾಲೆಗಳಲ್ಲಿ 21 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಬಗ್ಗೆ ಅವರಿಗೆ ಶಿಕ್ಷಣ ನೀಡಿದೆ. ಅಷ್ಟೆ ಅಲ್ಲದೆ, 58,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಮರುಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ 4000 ಕ್ಕೂ ಹೆಚ್ಚು ಮೇಜುಗಳು ಮತ್ತು ಬೆಂಚುಗಳನ್ನು ಸರ್ಕಾರಿ ಶಾಲೆಗಳಿಗೆ ವಿತರಣೆ ಮಾಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನ್ಯೂಟ್ರಿಷನ್ ಸೈನ್ಸಸ್ ITC LTD ಮುಖ್ಯಸ್ಥೆ ಡಾ. ಅಗಾಥಾ ಬೆಟ್ಸಿ, ಐಸಿಎಂಎಲ್ ಮಾಲೂರ್ ITC ಲಿಮಿಟೆಡ್ ಮುಖ್ಯಸ್ಥರು ಮುತ್ತು ಕೃಷ್ಣ ಮೂರ್ತಿ, ಇಎಚ್ಎಸ್ & ಸಸ್ಟೈನಬಿಲಿಟಿ ITC LTD ಜಿಎಂ ಅನಂತ್ ಮಹೇಶ್ವರಿ ಹಾಗೂ ಸರ್ಕಾರಿ ಕಿರಿಯ ಪ್ರಾರ್ಥಮಿಕ ಪಾಠಶಾಲಾ ಮುಖ್ಯಶಿಕ್ಷಕಿ ಎಚ್‌. ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

3 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

5 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

7 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

10 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

21 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

21 hours ago