ಪ.ಜಾತಿ ಮತ್ತು ಪ.ಪಂಗಡ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಜಾರಿಯಾಗಿರುವ ಯೋಜನೆಗಳ ಸದ್ಬಳಕೆ ಆಗಬೇಕು-ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ಪ. ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ವಿವಿಧ ಯೋಜನೆಗಳು ಜಾರಿಗೊಳಿಸಿದ್ದು, ಅರ್ಹರಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ. ಜಾತಿ ಮತ್ತು ಪ. ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಡಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ನಿಗಮದ ವಿವಿಧ ಯೋಜನೆಗಳ ಕುರಿತ ಪೋಸ್ಟರ್ ಬಿಡುಗಡೆ ಗೊಳಿಸಿ ಅವರು ಮಾತನಾಡಿದರು.

ಅಲೆಮಾರಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ. ಜಾತಿ ಮತ್ತು ಪ.ಪಂಗಡ ನಿಗಮದಿಂದ ಹಲವು ಯೋಜನೆಗಳು ಜಾರಿಯಾಗಿದ್ದು ಭೂ ಒಡೆತನ ಯೋಜನೆ, ನಿವೇಶನ ಹಾಗೂ ಮನೆ ಸೌಲಭ್ಯ, ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸಮಗ್ರ ಗಂಗಾ ಕಲ್ಯಾಣ ಯೋಜನೆ ಕಾರ್ಯಕ್ರಮಗಳಿದ್ದು ಇವುಗಳ ಬಗ್ಗೆ ಅಲೆಮಾರಿ ಸಮುದಾಯದ ಜನರಿಗೆ ಅರಿವು ಮೂಡಿಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಕ್ರಮ ವಹಿಸಿ ಎಂದರು.

2023 ರಿಂದ 24 ನೇ ಸಾಲಿನ ವರೆಗೆ ನಿಗಮದ ವಿವಿಧ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ಧ ಫಲಾನುಭವಿಗಳ ಆಯ್ಕೆಯನ್ನು ಲಾಟರಿ ಮೂಲಕ(ರ್ಯಾಂಡಮ್) ಸಮಿತಿ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಟಿ.ಎಲ್.ಎಸ್ ಪ್ರೇಮ, ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾದ ಜಿ, ನಾರಾಯಣ, ರತ್ನಮ್ಮ, ಎಂ.ರವಿ, ಹನುಮಂತರಾಜು, ವೆಂಕಟೇಶ್, ನಾಲ್ಕು ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

1 day ago