Categories: ರಾಜ್ಯ

ಪ.ಜಾ, ಪ.ಪಂ ಮೀಸಲಾತಿ ಪ್ರಮಾಣ ಹೆಚ್ಚಳ: ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ; ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರ ಗೃಹ ಇಲಾಖೆಗೆ ಪತ್ರ

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ ಶೇ.15 ರಿಂದ ಶೇ. 17 ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಶೇ. 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆಯನ್ನು ಸಂವಿಧಾನದ 9 ನೇ ಶೆಡ್ಯೂಲ್ ಗೆ ಸೇರಿಸುವ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು‌ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಅವಕಾಶ ವಂಚಿತ ಸಮುದಾಯಗಳ ಕುರಿತು ನಮ್ಮ ಸರ್ಕಾರದ ಬದ್ಧತೆಗೆ ಇದು ನಿದರ್ಶನವಾಗಿದೆ. ಉಳಿದ ಸಾಂವಿಧಾನಿಕ ಪ್ರಕ್ರಿಯೆಗಳು ಜಾರಿಯಲ್ಲಿವೆ.

ವಿರೋಧ ಪಕ್ಷಗಳ ಟೀಕೆ ಟಿಪ್ಪಣಿಗೆ ಪ್ರತಿಕ್ರಿಯಿಸಿದ ಅವರು, ಜನ ಜಾಣರಿದ್ದಾರೆ. ನಿಮ್ಮ ಆರೋಪಗಳು ಕಂಠ ಶೋಷಣೆಗೆ ಮಾತ್ರ ಎಂದು ತಿರುಗುಬಾಣ ನೀಡಿದ್ದಾರೆ.

ಪರಿಶಿಷ್ಟ ಸಮುದಾಯಗಳ ಮೀಸಲಾತಿ ಹೆಚ್ಚಳದ ಬಗ್ಗೆ ನಮಗಿರುವ ಬದ್ಧತೆಯನ್ನು ಪ್ರಶ್ನಿಸುತ್ತಿರುವವರು ಒಮ್ಮೆ ಕನ್ನಡಿಯಲ್ಲಿ ತಮ್ಮ ಮುಖ ನೋಡಿಕೊಳ್ಳಲೇಬೇಕು. ಶೋಷಿತ ವರ್ಗಗಳು 40 ವರ್ಷಗಳಿಂದ ನಿಮ್ಮೆದುರು ಆಸೆ, ನಿರೀಕ್ಷೆ ಭರವಸೆಗಳಿಂದ ಕೈಯೊಡ್ಡಿ ನಿಂತಿದ್ದವು.

ಬಾಯಿ ಮಾತಿನ ಭರವಸೆ ಕೊಟ್ಟು-ಕೊಟ್ಟು ಓಟು ಒತ್ತಿಸಿಕೊಂಡವರು ನೀವು, ಯಾವ ಭರವಸೆ ಕೊಡದಿದ್ದರೂ ಮೀಸಲಾತಿ ಹೆಚ್ಚಳ ಮಾಡಿ ಅವರ ಬದುಕಿಗೆ ಬೆಳಕಾದವರು ನಾವು. ಹೆಚ್ಚಿಸಲಾಗಿರುವ ಮೀಸಲಾತಿಯ ಲಾಭಗಳನ್ನು ಈಗಾಗಲೇ ಶೋಷಿತ ಸಮುದಾಯಗಳು ಪಡೆಯುತ್ತಿವೆ ಎಂದು ಸಾಮಾಜಿಕ ಜಾಲತಾಣದಲ್ಲಿ‌ ಸಿಎಂ ಬೊಮ್ಮಾಯಿ‌ ಬರೆದುಕೊಂಡಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು ನಿರಂತರವಾಗಿ ಆಮರಣಾಂತ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದರು. ಮೀಸಲು ಪರಿಷ್ಕರಣೆ ಸಂಬಂಧ ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಅನುಷ್ಠಾನ ಮಾಡುವಂತೆಯೂ ಆಗ್ರಹಿಸಿದ್ದರು. ತೀವ್ರ ಹೋರಾಟಕ್ಕೆ ಮಣಿದ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿಯನ್ನು ಅವಲೋಕಿಸಿ, ರಾಜ್ಯಕ್ಕೆ ಶಿಫಾರಸು ಮಾಡಲು ನ್ಯಾ .ಸುಭಾಷ್ ಅಡಿ ಸಮಿತಿಯನ್ನು ಕೂಡ ರಚಿಸಿತ್ತು .

ಈ ಸಮಿತಿ ಎಸ್ಸಿ ಎಸ್ಟಿ ಮೀಸಲು ಪರಿಷ್ಕರಣೆ ಸಂಬಂಧ ತನ್ನ ಅಭಿಪ್ರಾಯ ದಾಖಲಿಸಿ, ಕೇಂದ್ರ ಸರ್ಕಾರಿ ಉದ್ಯೋಗ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಬುಡಕಟ್ಟು ಪಂಗಡಗಳ ಮೀಸಲಾತಿಯನ್ನು ಹೋಲಿಸಿದಲ್ಲಿ ಬುಡಕಟ್ಟು ಮೀಸಲಾತಿ ಕೊರತೆಯನ್ನು ಗುರುತಿಸಿತ್ತು. ಈ ಅಂಶವನ್ನು ಪರಿಗಣಿಸಿ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ.

Ramesh Babu

Journalist

Recent Posts

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

23 minutes ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

35 minutes ago

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

3 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

4 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

9 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

11 hours ago