ಪ.ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ದಾಖಲು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಹಾಗೂ ನೆಲಮಂಗಲ ತಾಲೂಕುಗಳಲ್ಲಿ ಪಡೆಯಬಹುದಾಗಿದೆ. ಮೇ 3ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.

*ಷರತ್ತುಗಳು*

ವಿದ್ಯಾರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು.
2024 25 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇಕಡ 60 ಕ್ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ವರಮಾನ 2,50,000 ಗಳು ಒಳಗಿರಬೇಕು. ತಹಶೀಲ್ದಾರ್ ರವರಿಂದ ಪಡೆದ ಜಾತಿ ಮತ್ತು ಆದಾಯ ಪತ್ರ ಕಡ್ಡಾಯವಾಗಿ ಲಗತಿಸಬೇಕು.

ಪ್ರತಿಷ್ಠಿತ ಶಾಲೆಗಳಿಗೆ ಒಮ್ಮೆ ದಾಖಲಾದ ವಿದ್ಯಾರ್ಥಿಗಳು 10 ಅಥವಾ 12ನೇ ತರಗತಿಯವರೆಗೆ ದಾಖಲಾದ ವಿದ್ಯಾ ಸಂಸ್ಥೆಯಲ್ಲಿ ವ್ಯಾಸಂಗ ಮುಂದುವರಿಸುವುದು
10ನೇ ತರಗತಿ ವ್ಯಾಸಂಗ ಪೂರ್ಣಗೊಳಿಸಿದ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಪ್ರತಿಷ್ಠಿತ ಶಾಲೆಯಲ್ಲಿ ಪಿಯುಸಿ ತರಗತಿಯನ್ನು ನಡೆಸದೇ ಇದ್ದಲ್ಲಿ ಅದೇ ಜಿಲ್ಲೆಯಲ್ಲಿನ ಪಿಯುಸಿ ಇರುವ ಪ್ರತಿಷ್ಠಿತ ಶಾಲೆ ಅಥವಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.
ಪ್ರವೇಶ ಪರೀಕ್ಷೆಯನ್ನು ಡಯಟ್ ಮೂಲಕ ನಡೆಸಿ ಅರ್ಹ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುವುದು.

ಬಡತನ ರೇಖೆಗಿಂತ ಕೆಳಗಿನ ಮಟ್ಟದ ಹಾಗೂ ಈ ಯೋಜನೆಯ ಸೌಲಭ್ಯವನ್ನು ಪಡೆಯಲು ವಿಫಲರಾಗಿರುವ ಈ ಕೆಳಕಂಡ ಅತಿ ಹಿಂದುಳಿದ ವರ್ಗದವರಿಗೆ ಸೌಲಭ್ಯವನ್ನು ನೀಡಲು ಉದ್ದೇಶಿಸಲಾಗಿರುತ್ತದೆ.

ಸಫಾಯಿ ಕರ್ಮಚಾರಿಗಳ ಮಕ್ಕಳು, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರ ಮಕ್ಕಳು, ಕೋವಿಡ್ 19 ಪ್ರಕೃತಿ ವಿಕೋಪದಿಂದ ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು, ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳಗೇರಿಯಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲವಾದದಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೋಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂ.ಸಂ. 080-29787448 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

41 minutes ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

51 minutes ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

2 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

3 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

6 hours ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

14 hours ago