ಫಲಿಸಿದ ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ: ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಕನ್ನಡ ಚಲನಚಿತ್ರ ರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರನ್ನು ರಂಜಿಸಿದ ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು, ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.

1972ರಲ್ಲಿ ವಂಶವೃಕ್ಷ ಚಿತ್ರದಲ್ಲಿ ನಟಿಸಿದ್ದ ವಿಷ್ಣುವರ್ಧನ್ ಅವರು ಅದೇ ವರ್ಷ ಬಿಡುಗಡೆಯಾಗಿದ್ದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಕಾಣಿಸಿಕೊಂಡರು. ಈ ಚಿತ್ರ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದು ಮೊದಲ ಪ್ರಯತ್ನದಲ್ಲೇ ವಿಷ್ಣುವರ್ಧನ್ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು 220 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ವಿಷ್ಣುವರ್ಧನ್ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿತ್ತು.

ದಿವಂಗತ ಸರೋಜಾದೇವಿ ಹಿನ್ನೆಲೆ

ಕನ್ನಡದ ಹಿರಿಯ ಚಲನಚಿತ್ರ ನಟಿಯರಲ್ಲಿ ಬಿ. ಸರೋಜಾದೇವಿ ಸಹ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿಯಾಗಿ ಗುರುತಿಸಿಕೊಂಡರು. ಅವರು ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಮತ್ತು ತಮಿಳಿನಲ್ಲಿ ‘ಕನ್ನಡತು ಪೈಂಗಿಲಿ’ (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

ಸರೋಜಾದೇವಿ ಅವರು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ 2008ರ ಜೀವಮಾನ ಸಾಧನೆ ಪ್ರಶಸ್ತಿ ನೀಡಿತ್ತು. ಇನ್ನು 1992ರಲ್ಲಿ ‘ಪದ್ಮಭೂಷಣ ಪ್ರಶಸ್ತಿ’ ಮತ್ತು 1969ರಲ್ಲಿ ಪದ್ಮಶ್ರೀ ಪಡೆದಿದ್ದರು.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

9 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

10 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

15 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago