ಫಲಿಸಿದ ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ: ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಕನ್ನಡ ಚಲನಚಿತ್ರ ರಂಗದಲ್ಲಿ ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಕನ್ನಡಿಗರನ್ನು ರಂಜಿಸಿದ ಹಿರಿಯ ನಟ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಮತ್ತು ಅಭಿನಯ ಶಾರದೆ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಷ್ಣು ಅಭಿಮಾನಿಗಳ ದಶಕಗಳ ಬೇಡಿಕೆ ಫಲಿಸಿದ್ದು, ರಾಜ್ಯ ಸರ್ಕಾರ ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ಹಿರಿಯ ನಟಿ ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದೆ.

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಅನಿರುದ್ಧ್ ಅವರು ಮನವಿ ಮಾಡಿಕೊಂಡಿದ್ದರು. ಅಲ್ಲದೇ, ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಅವರು ಕೂಡ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಮನವಿ ಮಾಡಿದ್ದರು.

1972ರಲ್ಲಿ ವಂಶವೃಕ್ಷ ಚಿತ್ರದಲ್ಲಿ ನಟಿಸಿದ್ದ ವಿಷ್ಣುವರ್ಧನ್ ಅವರು ಅದೇ ವರ್ಷ ಬಿಡುಗಡೆಯಾಗಿದ್ದ ದಿಗ್ಗಜ ನಿರ್ದೇಶಕ ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕ ನಟನಾಗಿ ಕಾಣಿಸಿಕೊಂಡರು. ಈ ಚಿತ್ರ ಬ್ಲಾಕ್ ಬಸ್ಟರ್ ಚಿತ್ರವಾಗಿದ್ದು ಮೊದಲ ಪ್ರಯತ್ನದಲ್ಲೇ ವಿಷ್ಣುವರ್ಧನ್ ದೊಡ್ಡ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡರು. ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳ, ಹಿಂದಿ ಭಾಷೆಗಳಲ್ಲಿ ಸುಮಾರು 220 ಸಿನಿಮಾಗಳಲ್ಲಿ ವಿಷ್ಣುವರ್ಧನ್ ನಟಿಸಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯವು 2005ರಲ್ಲಿ ವಿಷ್ಣುವರ್ಧನ್ ಅವರಿಗೆ ಗೌರವ ಡಾಕ್ಟರೇಟ್ ಕೊಟ್ಟು ಗೌರವಿಸಿತ್ತು.

ದಿವಂಗತ ಸರೋಜಾದೇವಿ ಹಿನ್ನೆಲೆ

ಕನ್ನಡದ ಹಿರಿಯ ಚಲನಚಿತ್ರ ನಟಿಯರಲ್ಲಿ ಬಿ. ಸರೋಜಾದೇವಿ ಸಹ ಒಬ್ಬರು. ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿಯಾಗಿ ಗುರುತಿಸಿಕೊಂಡರು. ಅವರು ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ‘ಅಭಿನಯ ಸರಸ್ವತಿ’ ಮತ್ತು ತಮಿಳಿನಲ್ಲಿ ‘ಕನ್ನಡತು ಪೈಂಗಿಲಿ’ (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ.

ಸರೋಜಾದೇವಿ ಅವರು ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಭಾರತದ 60ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರ 2008ರ ಜೀವಮಾನ ಸಾಧನೆ ಪ್ರಶಸ್ತಿ ನೀಡಿತ್ತು. ಇನ್ನು 1992ರಲ್ಲಿ ‘ಪದ್ಮಭೂಷಣ ಪ್ರಶಸ್ತಿ’ ಮತ್ತು 1969ರಲ್ಲಿ ಪದ್ಮಶ್ರೀ ಪಡೆದಿದ್ದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

10 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

12 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

17 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago