ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.
ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.
ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…