ಫವತಿ ಖಾತೆ ವಿಶೇಷ ಆಂದೋಲನಕ್ಕೆ ಚಾಲನೆ: ಆಂದೋಲನವನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜ್ ಕರೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.

ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು‌ ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.

ನಂತರ ತಾಲೂಕು‌ ಕಚೇರಿಯ ವಿವಿಧ ಇಲಾಖಾ ಕೌಂಟರ್ ಗಳಿಗೆ ದಿಢೀರ್ ಅಧಿಕಾರಿಗಳ ಕಾರ್ಯವೈಖರಿ ವಿಕ್ಷಣೆ ಮಾಡಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ಪ್ರತ್ಯೇಕ ಕೌಂಟರ್ ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Ramesh Babu

Journalist

Recent Posts

ಇಬ್ಬರು ಏರೋಸ್ಪೇಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕಾಲೇಜಲ್ಲಿ ಶೋಕಿ ಮಾಡೋ ಖಯಾಲಿ: ಆದ್ರೆ ಜೇಬಲ್ಲಿ ಕಾಂಚಾಣ ಇಲ್ಲ: ಕಾಸಿಗಾಗಿ ಏನು ಮಾಡಿದ್ರು ಗೊತ್ತಾ……

ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…

7 hours ago

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

8 hours ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

13 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

15 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

17 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

19 hours ago