ಫವತಿ ಖಾತೆ ವಿಶೇಷ ಆಂದೋಲನಕ್ಕೆ ಚಾಲನೆ: ಆಂದೋಲನವನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜ್ ಕರೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.

ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು‌ ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.

ನಂತರ ತಾಲೂಕು‌ ಕಚೇರಿಯ ವಿವಿಧ ಇಲಾಖಾ ಕೌಂಟರ್ ಗಳಿಗೆ ದಿಢೀರ್ ಅಧಿಕಾರಿಗಳ ಕಾರ್ಯವೈಖರಿ ವಿಕ್ಷಣೆ ಮಾಡಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ಪ್ರತ್ಯೇಕ ಕೌಂಟರ್ ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

4 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

19 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago