ಫವತಿ ಖಾತೆ ವಿಶೇಷ ಆಂದೋಲನಕ್ಕೆ ಚಾಲನೆ: ಆಂದೋಲನವನ್ನ ರೈತರು ಸದುಪಯೋಗಪಡಿಸಿಕೊಳ್ಳಬೇಕು- ಶಾಸಕ ಧೀರಜ್ ಮುನಿರಾಜ್ ಕರೆ

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.

ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು‌ ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪ್ರತಿ ನಾಡಕಚೇರಿ ವ್ಯಾಪ್ತಿಯ ಕೇಂದ್ರ ಸ್ಥಾನದಲ್ಲಿ ಫವತಿ ವಾರಸು ಖಾತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.

ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ  ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.

ನಂತರ ತಾಲೂಕು‌ ಕಚೇರಿಯ ವಿವಿಧ ಇಲಾಖಾ ಕೌಂಟರ್ ಗಳಿಗೆ ದಿಢೀರ್ ಅಧಿಕಾರಿಗಳ ಕಾರ್ಯವೈಖರಿ ವಿಕ್ಷಣೆ ಮಾಡಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ವಿತರಣೆಗೆ ಪ್ರತ್ಯೇಕ ಕೌಂಟರ್ ತೆಗೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

16 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago