ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 50-60 ವರ್ಷಗಳಿಂದಲೂ ಹಿಡುವಳಿ ಜಮೀನುಗಳ ಖಾತೆದಾರರು ನಿಧನ ಹೊಂದಿದ್ದರೂ ಸಹ ವಾರಸುದಾರರಿಗೆ ಖಾತೆಯಾಗದೇ ಹಾಗೇ ಇದೆ. ಈ ಹಿನ್ನೆಲೆ ಕಂದಾಯ ಇಲಾಖಾ ವತಿಯಿಂದ ಫವತಿ ವಾರಸು ಖಾತೆ ವಿಶೇಷ ಆಂದೋಲನವನ್ನ ಹಮ್ಮಿಕೊಳ್ಳಲಾಗಿದೆ. ಬಾಕಿ ಇರುವ ಎಲ್ಲಾ ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05ರ ವರೆಗೆ ಅವಕಾಶ ಮಾಡಲಾಗಿದೆ ಎಂದು ಶಾಸಕ ಧೀರಜ್ ಹೇಳಿದರು.
ತಾಲೂಕಿನಲ್ಲಿ ಸುಮಾರು 11 ಸಾವಿರ ಫವತಿ ಖಾತೆಯಾಗದೆ ಇರುವ ಹಕ್ಕುದಾರರು ಸರ್ಕಾರದ ಮಹತ್ವ ಯೋಜನೆಗಳಾದ ಪಿ.ಎಂ.ಕಿಸಾನ್ ಯೋಜನೆ, ಬರ, ಅತಿವೃಷ್ಟಿ ಪರಿಹಾರ ಹಾಗೂ ಇನ್ನುಳಿದ ಸರ್ಕಾರದ ಯಾವುದೇ ಯೋಜನೆಗಳ ಸವಲತ್ತುಗಳನ್ನು ಪಡೆಯಲು ರೈತರಿಗೆ ಸಾಧ್ಯವಾಗದೇ ಆರ್ಥಿಕ ನಷ್ಟವನ್ನು ಅನುಭವಿಸುತ್ತಿರುತ್ತಾರೆ. ಸರ್ಕಾರದ ಸವಲತ್ತು ಪಡೆಯಲು ರೈತರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ನಂತರ ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ಮಾತನಾಡಿ, ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್ (ನೀಡಲು ಒಪ್ಪಿದಲ್ಲಿ), ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು ಎಂದರು.
ರೈತರು ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಸದುಪಯೋಗ ಪಡೆದುಕೊಳ್ಳಲು ಎಂದು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…
ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…