ಫವತಿ ಖಾತೆ ವಿಶೇಷ ಆಂದೋಲನ: ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಫವತಿ ಖಾತಾ ಪ್ರಕರಣಗಳು ಬಹಳಷ್ಟು ಇದ್ದು ಅವರ ವಾರಸುದಾರರು ಸರ್ವೆ ನಂಬರ್ ಗಳ ಫವತಿ ಖಾತೆ ಬದಲಾವಣೆ ಮಾಡಿಸಿಕೊಳ್ಳದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05 ವರೆಗೆ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು.

ಆದರೆ ಫವತಿ ಖಾತೆ ಅರ್ಜಿಗಳು ನಿರೀಕ್ಷಿತ ಮಟ್ಟದಲ್ಲಿ ಸ್ವೀಕೃತವಾಗದ ಕಾರಣ ಹಾಗೂ ಇನ್ನೂ ಹೆಚ್ಚಿನ ರೈತರುಗಳು, ಫಲಾನುಭವಿಗಳು ಫವತಿ ಖಾತೆ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶ ವಿಸ್ತರಿಸಲು ಕೋರಿರುವ ಮೇರೆಗೆ ಪಾವತಿ ವಾರಸು ಖಾತೆ ಆಂದೋಲನವನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿರುತ್ತದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್, ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ಆದ್ದರಿಂದ ರೈತರು ಮೇಲಿನ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ನಾಡಕಚೇರಿ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿ ದಾಖಲಾತಿಗಳನ್ನು ಸಲ್ಲಿಸಿ ಸದುಪಯೋಗ ಪಡೆಯಲು ಹಾಗೂ ಫವತಿ ಖಾತೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

39 minutes ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

1 hour ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

7 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

8 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

11 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

13 hours ago