ಫವತಿ ಖಾತೆ ವಿಶೇಷ ಆಂದೋಲನ: ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಫವತಿ ಖಾತಾ ಪ್ರಕರಣಗಳು ಬಹಳಷ್ಟು ಇದ್ದು ಅವರ ವಾರಸುದಾರರು ಸರ್ವೆ ನಂಬರ್ ಗಳ ಫವತಿ ಖಾತೆ ಬದಲಾವಣೆ ಮಾಡಿಸಿಕೊಳ್ಳದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05 ವರೆಗೆ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು.

ಆದರೆ ಫವತಿ ಖಾತೆ ಅರ್ಜಿಗಳು ನಿರೀಕ್ಷಿತ ಮಟ್ಟದಲ್ಲಿ ಸ್ವೀಕೃತವಾಗದ ಕಾರಣ ಹಾಗೂ ಇನ್ನೂ ಹೆಚ್ಚಿನ ರೈತರುಗಳು, ಫಲಾನುಭವಿಗಳು ಫವತಿ ಖಾತೆ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶ ವಿಸ್ತರಿಸಲು ಕೋರಿರುವ ಮೇರೆಗೆ ಪಾವತಿ ವಾರಸು ಖಾತೆ ಆಂದೋಲನವನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿರುತ್ತದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್, ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ಆದ್ದರಿಂದ ರೈತರು ಮೇಲಿನ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ನಾಡಕಚೇರಿ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿ ದಾಖಲಾತಿಗಳನ್ನು ಸಲ್ಲಿಸಿ ಸದುಪಯೋಗ ಪಡೆಯಲು ಹಾಗೂ ಫವತಿ ಖಾತೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago