ಫವತಿ ಖಾತೆ ವಿಶೇಷ ಆಂದೋಲನ: ಅವಧಿ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯ ರೈತ ಬಾಂಧವರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ಫವತಿ ಖಾತಾ ಪ್ರಕರಣಗಳು ಬಹಳಷ್ಟು ಇದ್ದು ಅವರ ವಾರಸುದಾರರು ಸರ್ವೆ ನಂಬರ್ ಗಳ ಫವತಿ ಖಾತೆ ಬದಲಾವಣೆ ಮಾಡಿಸಿಕೊಳ್ಳದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು ಈ ಬಗ್ಗೆ ವಿಶೇಷ ಆಂದೋಲನದ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಫವತಿ ಖಾತೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಜನವರಿ 05 ರಿಂದ ಫೆಬ್ರವರಿ 05 ವರೆಗೆ ಅರ್ಜಿಗಳನ್ನು ಸ್ವೀಕರಿಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು.

ಆದರೆ ಫವತಿ ಖಾತೆ ಅರ್ಜಿಗಳು ನಿರೀಕ್ಷಿತ ಮಟ್ಟದಲ್ಲಿ ಸ್ವೀಕೃತವಾಗದ ಕಾರಣ ಹಾಗೂ ಇನ್ನೂ ಹೆಚ್ಚಿನ ರೈತರುಗಳು, ಫಲಾನುಭವಿಗಳು ಫವತಿ ಖಾತೆ ಅರ್ಜಿಗಳನ್ನು ಸಲ್ಲಿಸಲು ಕಾಲಾವಕಾಶ ವಿಸ್ತರಿಸಲು ಕೋರಿರುವ ಮೇರೆಗೆ ಪಾವತಿ ವಾರಸು ಖಾತೆ ಆಂದೋಲನವನ್ನು ಮಾರ್ಚ್ 15 ರವರೆಗೆ ವಿಸ್ತರಿಸಲಾಗಿರುತ್ತದೆ.

ಖಾತೆ ಬದಲಾವಣೆಗೆ ಅರ್ಜಿಯೊಂದಿಗೆ ಅರ್ಜಿದಾರರ ಆಧಾರ್ ಕಾರ್ಡ್, ಗಣಕೀಕೃತ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಪ್ರಮಾಣ ಪತ್ರ ( affidavit) ಇನ್ನಿತರೆ ದಾಖಲಾತಿಗಳು (ಅಗತ್ಯವಿದ್ದಲ್ಲಿ) ಸಲ್ಲಿಸಬೇಕು.
ಆದ್ದರಿಂದ ರೈತರು ಮೇಲಿನ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಹಶೀಲ್ದಾರ್, ಗ್ರೇಡ್-2 ತಹಶೀಲ್ದಾರ್, ನಾಡಕಚೇರಿ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು ಅಥವಾ ಗ್ರಾಮ ಆಡಳಿತಾಧಿಕಾರಿಗಳನ್ನು ಸಂಪರ್ಕಿಸಿ ದಾಖಲಾತಿಗಳನ್ನು ಸಲ್ಲಿಸಿ ಸದುಪಯೋಗ ಪಡೆಯಲು ಹಾಗೂ ಫವತಿ ಖಾತೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Ramesh Babu

Journalist

Recent Posts

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

3 minutes ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

32 minutes ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

2 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

3 hours ago

ಜನ ಪ್ರತಿನಿಧಿಗಳೆಂಬ ಸಮಾಜ ಸೇವಕರೋ – ಸಂವಿಧಾನ ರಕ್ಷಕರೋ – ರೇಸು ಕುದುರೆಗಳೋ – ಗೋಮುಖ ವ್ಯಾಘ್ರಗಳೋ…..?

ಕೃಷಿಕರ ನಿರೀಕ್ಷೆ,.... ಅನ್ನದ ಋಣ ಮರೆತ ರಾಜಕಾರಣಿಗಳು,..... ಅನ್ನದಾತರ ಅಂತರಂಗ...... ಮುಂಗಾರು ಮಳೆಯ ಹೊಸ್ತಿಲಲ್ಲಿ.... ರೈತರ ದಾರುಣ ಆತ್ಮಹತ್ಯೆಗಳು...... ಜನ…

6 hours ago

‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ…

6 hours ago