ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.
87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…