ದೇವನಹಳ್ಳಿ ತಾಲ್ಲೂಕು, ಕುಂದಾಣ ಹೋಬಳಿಗೆ ಸೇರಿದ ದೊಡ್ಡಗೊಲ್ಲಹಳ್ಳಿ ಮತ್ತು ಚಪ್ಪರದಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ಫಾಕ್ಸ್ ಕಾನ್ ಕಂಪನಿಗೆ ಭೂಮಿ ಮಂಜೂರಾಗಿದ್ದು, ಸಂಬಂಧಿಸಿದ ಭೂ ಪರಿಹಾರವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗುವುದು ಎಂದು ಕೆಐಎಡಿಬಿ ಸಿಇಓ ಡಾ. ಮಹೇಶ ಅವರು ಶುಕ್ರವಾರ ತಿಳಿಸಿದ್ದಾರೆ.
ಈ ಗ್ರಾಮಗಳಲ್ಲಿ ಕಂಪನಿಗೆ ಮಂಜೂರಾಗಿರುವ ಭೂಮಿಗೆ ಭೂಸ್ವಾಧೀನ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಸಹಕಾರ ಪಡೆದು ಫೆನ್ಸಿಂಗ್ ಮಾಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದೂ ಅವರು ಹೇಳಿದ್ದಾರೆ.
ದೇವನಹಳ್ಳಿ 3ನೇ ಅಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯವು ನೇರವಾಗಿ ಖಾತೆದಾರರಿಗೆ ಪರಿಹಾರ ಕೊಡಬಾರದೆಂದು ತಡೆಯಾಜ್ಞೆ ನೀಡಿದೆ. ಹೀಗಾಗಿ, ಪರಿಹಾರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಡಲಾಗುತ್ತದೆ ಎಂದು ವಿವರಿಸಿದ್ದಾರೆ.
ಕುಂದಾಣ ಹೋಬಳಿಯ ಅರವನಹಳ್ಳಿ, ದೊಡ್ಡಗೊಲ್ಲಹಳ್ಳಿ, ಚಪ್ಪರದಹಳ್ಳಿ ಮತ್ತು ಬೈರದೇನಹಳ್ಳಿ ಗ್ರಾಮಗಳಲ್ಲಿ ಒಟ್ಟು 867.37 ಎಕರೆ ವಿಸ್ತೀರ್ಣದ ಜಮೀನನ್ನು ಕೈಗಾರಿಕಾ ಪ್ರದೇಶದ ಸ್ಥಾಪನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದ್ದು. ಈ ಪೈಕಿ ಫಾಕ್ಸ್ಕಾನ್ ಕಂಪನಿಗೆ 300 ಎಕರೆ ಭೂಮಿಯನ್ನು ಹಂಚಿಕೆ ಮಾಡಲಾಗಿರುತ್ತದೆ ಎಂದಿದ್ದಾರೆ.
87/4ಪಿ, 90/1 ಮತ್ತು ಚಪ್ಪರದಹಳ್ಳಿ ಗ್ರಾಮದ ಸ.ನಂ.4ಗಳಲ್ಲಿ ಕಂಪನಿಯ ವತಿಯಿಂದ ಫೆನ್ಸಿಂಗ್
ಹಾಕಲು ಹೋದಾಗ ಖಾತೆದಾರರು ಪ್ರತಿಭಟನೆ ನಡೆಸಿ ಫೆನ್ಸಿಂಗ್ ಹಾಕಲು ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…